Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏಪ್ರಿಲ್ನಲ್ಲಿ ಗಣೇಶನ 'ಉಲ್ಲಾಸ ಉತ್ಸಾಹ'
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಉಲ್ಲಾಸ ಉತ್ಸಾಹ' ಚಿತ್ರ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಬಿ.ಪಿ.ತ್ಯಾಗರಾಜ್ ತಿಳಿಸಿದ್ದಾರೆ.ಕನ್ನಡದವರಾದ ಯಶೋಸಾಗರ್ ಹಾಗೂ ಸ್ನೇಹಾ ಉಲ್ಲಾಳ್ ಅಭಿನಯದಲ್ಲಿ ತೆಲುಗು ಭಾಷೆಯಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ 'ಉಲ್ಲಾಸಂಗ ಉತ್ಸಾಹಂಗ'. ಇದೇ ಚಿತ್ರ ಕನ್ನಡದಲ್ಲಿ 'ಉಲ್ಲಾಸ ಉತ್ಸಾಹ' ಶೀರ್ಷಿಕೆಯಿಂದ ನಿರ್ಮಾಣವಾಗಿದೆ ಕಾಂತಿಸಿನಿ ಕ್ರಿಯೇಷನ್ಸ್ ಮೂಲಕ.
ಹದಿಹರೆಯದ ಹುಡುಗರ ಹುಡುಗಾಟ ಹಾಗೂ ಆ ಹುಡುಗಾಟದಲ್ಲಿ ಹುಟ್ಟುವ ಪ್ರೀತಿ, ಅದರ ಪೋಷಣೆ ಹೀಗೆ ಹಲವು ಸ್ವಾರಸ್ಯಕರ ಘಟನೆಗಳನ್ನೊಳಗೊಂಡ ಈ ಚಿತ್ರ ಬೇಸಿಗೆ ರಜೆಯ ಸಮಯದಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರರಸಿಕರಿಗೆ ರಂಜನೆಯ ರಸದೌತಣ ನೀಡಲಿದೆ ಎನ್ನುತ್ತಾರೆ ನಿರ್ದೇಶಕ ದೇವರಾಜ್ಪಾಲನ್.
ಜಿ.ವಿ.ಪ್ರಕಾಶ್ಕುಮಾರ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಕರುಣಾಕರನ್ ಕಥೆ ಬರೆದಿದ್ದಾರೆ. ಜಿ.ಎಸ್.ವಿ.ಸೀತಾರಾಂ ಛಾಯಾಗ್ರಹಣ, ಪಿ.ಆರ್.ಸೌಂದರ್ರಾಜ್ ಸಂಕಲನ, ಇಮ್ರಾನ್ ನೃತ್ಯ, ರವಿಶಂಕರ್, ದತ್ತಣ್ಣ ನಿರ್ಮಾಣ ನಿರ್ವಹಣೆಯಿರುವ ಚಿತ್ರ್ರದ ತಾರಾಬಳಗದಲ್ಲಿ ಗಣೇಶ್, ಯಾಮಿಗೌತಮಿ, ರಂಗಾಯಣರಘು, ಸಾಧುಕೋಕಿಲಾ, ತುಳಸಿಶಿವಮಣಿ, ಪ್ರೀತಿಚಂದ್ರಶೇಖರ್, ದೊಡ್ಡಣ್ಣ, ವಿಶ್ವ, ಮಿತ್ರ ಮುಂತಾದವರಿದ್ದಾರೆ.