Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಕಾಶ್ ರೈ ರೂಪದಲ್ಲಿ ಎದ್ದು ಬಂದ ವೈಎಸ್ಆರ್!
ನಟ ಪ್ರಕಾಶ್ ರೈ ರೂಪದಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಎದ್ದುಬಂದರೆ? ಹೌದು ಎನ್ನುತ್ತಿದ್ದಾರೆ ತೆಲುಗು ಚಿತ್ರರಂಗದ ಹಿರಿಯ ನಟಿ ವಿಜಯ ನಿರ್ಮಲಾ. ಇವರು ತೆಲುಗಿನ ಸೂಪರ್ ಸ್ಟಾರ್ ಕೃಷ್ಣ ಅವರ ಮಡದಿ. ಇತ್ತೀಚೆಗೆ ಇವರ ಪುತ್ರ ಮಹೇಶ್ ಬಾಬು ಅಭಿನಯದ 'ದೂಕುಡು' ಚಿತ್ರ ಬಾಕ್ಸಾಫೀಸನ್ನು ಕೊಳ್ಳೆ ಹೊಡೆದಿದೆ.
ಈ ಚಿತ್ರದಲ್ಲಿ ಪ್ರಕಾಶ್ ರೈ ಕೂಡ ಅಭಿನಯಿಸಿದ್ದಾರೆ. ಚಿತ್ರದಲ್ಲಿನ ಅವರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಿಜಯ ನಿರ್ಮಲಾ ಅವರು, ಚಿತ್ರದಲ್ಲಿ ಪ್ರಕಾಶ್ ಅವರ ಪಾತ್ರವನ್ನು ನೋಡುತ್ತಿದ್ದರೆ ಕಣ್ಮರೆಯಾದ ವೈಎಸ್ ರಾಜಶೇಖರ ರೆಡ್ಡಿ ಅವರೇ ಎದ್ದುಬಂದಂತೆ ಭಾಸವಾಗುತ್ತಿತ್ತು ಎಂದಿದ್ದಾರೆ.
ಚಿತ್ರದಲ್ಲಿನ ಪ್ರಕಾಶ್ ರೈ ಅವರ ಪಾತ್ರದ ಬಗ್ಗೆ ಎಲ್ಲಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಕಾಶ್ ರೈ ಅವರ ಪಾತ್ರ ಆಂಧ್ರದ ಕಾಂಗ್ರೆಸ್ ಮುಖಂಡ ದಿವಂಗತ ಪಿಜೆಆರ್ ಅವರಿಂದ ಪ್ರೇರಿತವಾಗಿತ್ತು. ಕೃಷ್ಣ ಹಾಗೂ ವಿಜಯ ನಿರ್ಮಲಾ ಅವರು ಕಾಂಗ್ರೆಸನ್ನು ಬಹಳ ದಿನಗಳಿಂದ ಬೆಂಬಲಿಸುತ್ತಾ ಬಂದವರು. ಅವರಿಗೆ ಪ್ರಕಾಶ್ ರೈ ಅವರ ಪಾತ್ರದಲ್ಲಿ ವೈಎಸ್ಆರ್ ಅಲ್ಲದೆ ಇನ್ಯಾರು ಕಾಣಲು ಸಾಧ್ಯ. (ಏಜೆನ್ಸೀಸ್)