Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಣ್ತೆರೆಸುವ ಸುದ್ದಿ: ಕಣ್ಣಿನ ದಾನಕ್ಕೆ ಮುಂದಾದ ಕನಸಿನಕನ್ಯೆ
'ವಿಷನ್2020'ಎಂಬ ಅಂಧತ್ವ ನಿವಾರಣೆಗೆ ಪಣ ತೊಟ್ಟಿರುವ ಸಂಸ್ಥೆಗೆ, ಹೇಮಾಮಾಲಿನಿ ವಿಶೇಷ ರಾಯಭಾರಿ. ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಂಧತ್ವ ನಿವಾರಿಸಲು ಭಾರತದಲ್ಲಿ ವರ್ಷಕ್ಕೆ 2ಲಕ್ಷ ಕಣ್ಣುಗಳ ಅವಶ್ಯಕತೆ ಇದೆ. ಆದರೆ 34,000ದಷ್ಟು ಕಣ್ಣುಗಳು ಮಾತ್ರ ಲಭ್ಯವಾಗುತ್ತಿವೆ ಎಂದು ಅವರು ಹೇಳಿದ್ದಾರೆ.
ಮಾನವನ ದೇಹದ ಅತ್ಯಂತ ಮೋಹಕ ಅಂಗಗಳು ಕಣ್ಣುಗಳು. ಪ್ರತಿಯೊಬ್ಬರೂ ತಮ್ಮ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದ ಹೇಮಮಾಲಿನಿ, ದೇಶದಲ್ಲಿ ಹಲವಾರು ಮಕ್ಕಳು ಅಂಧತ್ವದಿಂದ ನರಳುತ್ತಿರುವುದನ್ನು ನೆನೆಸಿಕೊಂಡರು. ಅಂಧತ್ವ ನಿವಾರಣೆಗೆ ಪ್ರತಿಯೊಬ್ಬರೂ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಕರೆ ನೀಡಿದರು.
ನಿಮ್ಮ ಕಣ್ಣುಗಳ ಬಗ್ಗೆ ಹೇಗೆ ಜಾಗ್ರತೆ ವಹಿಸುತ್ತೀರಿ? ಎಂಬ ಪ್ರಶ್ನೆಗೆ, ನನ್ನ ನೃತ್ಯ ಕಾರ್ಯಕ್ರಮಗಳು ಮತ್ತು ಚಿತ್ರೀಕರಣದ ವೇಳೆ ಕಣ್ಣು ಕೋರೈಸುವ ಬೆಳಕು ಮತ್ತು ಮೇಕಪ್ನಿಂದ ಉಂಟಾಗುವ ತೊಂದರೆಯನ್ನು ತಪ್ಪಿಸಲು ರೇಖಿ ಚಿಕಿತ್ಸೆಗೆ ಮೊರೆ ಹೋಗುತ್ತಿರುವುದಾಗಿ ಅವರು ತಿಳಿಸಿದ್ದಾರೆ.
(ಏಜನ್ಸೀಸ್)