Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಣ್ತೆರೆಸುವ ಸುದ್ದಿ: ಕಣ್ಣಿನ ದಾನಕ್ಕೆ ಮುಂದಾದ ಕನಸಿನಕನ್ಯೆ
'ವಿಷನ್2020'ಎಂಬ ಅಂಧತ್ವ ನಿವಾರಣೆಗೆ ಪಣ ತೊಟ್ಟಿರುವ ಸಂಸ್ಥೆಗೆ, ಹೇಮಾಮಾಲಿನಿ ವಿಶೇಷ ರಾಯಭಾರಿ. ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಂಧತ್ವ ನಿವಾರಿಸಲು ಭಾರತದಲ್ಲಿ ವರ್ಷಕ್ಕೆ 2ಲಕ್ಷ ಕಣ್ಣುಗಳ ಅವಶ್ಯಕತೆ ಇದೆ. ಆದರೆ 34,000ದಷ್ಟು ಕಣ್ಣುಗಳು ಮಾತ್ರ ಲಭ್ಯವಾಗುತ್ತಿವೆ ಎಂದು ಅವರು ಹೇಳಿದ್ದಾರೆ.
ಮಾನವನ ದೇಹದ ಅತ್ಯಂತ ಮೋಹಕ ಅಂಗಗಳು ಕಣ್ಣುಗಳು. ಪ್ರತಿಯೊಬ್ಬರೂ ತಮ್ಮ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದ ಹೇಮಮಾಲಿನಿ, ದೇಶದಲ್ಲಿ ಹಲವಾರು ಮಕ್ಕಳು ಅಂಧತ್ವದಿಂದ ನರಳುತ್ತಿರುವುದನ್ನು ನೆನೆಸಿಕೊಂಡರು. ಅಂಧತ್ವ ನಿವಾರಣೆಗೆ ಪ್ರತಿಯೊಬ್ಬರೂ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಕರೆ ನೀಡಿದರು.
ನಿಮ್ಮ ಕಣ್ಣುಗಳ ಬಗ್ಗೆ ಹೇಗೆ ಜಾಗ್ರತೆ ವಹಿಸುತ್ತೀರಿ? ಎಂಬ ಪ್ರಶ್ನೆಗೆ, ನನ್ನ ನೃತ್ಯ ಕಾರ್ಯಕ್ರಮಗಳು ಮತ್ತು ಚಿತ್ರೀಕರಣದ ವೇಳೆ ಕಣ್ಣು ಕೋರೈಸುವ ಬೆಳಕು ಮತ್ತು ಮೇಕಪ್ನಿಂದ ಉಂಟಾಗುವ ತೊಂದರೆಯನ್ನು ತಪ್ಪಿಸಲು ರೇಖಿ ಚಿಕಿತ್ಸೆಗೆ ಮೊರೆ ಹೋಗುತ್ತಿರುವುದಾಗಿ ಅವರು ತಿಳಿಸಿದ್ದಾರೆ.
(ಏಜನ್ಸೀಸ್)