Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕರ ಸಂಘದ ಅಧ್ಯಕ್ಷರಾಗಿ ಟಿ.ಎಸ್.ನಾಗಾಭರಣ
ಬೆಂಗಳೂರು : ಚಲನಚಿತ್ರ ನಿರ್ದೇಶಕರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಎಸ್.ನಾಗಾಭರಣ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಘದ ಅಧ್ಯಕ್ಷರಾಗಿ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಕಾರ್ಯನಿರ್ವಹಿಸುತ್ತಿದ್ದರು.
ಶ್ರೀರಾಂಪುರದಲ್ಲಿರುವ ಸಂಘದ ಕಚೇರಿಯಲ್ಲಿ ಭಾನುವಾರ(ನ.14) ನಡೆದ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಜೋಸೈಮನ್ವಿರುದ್ಧ ಐದು ಮತಗಳ ಅಂತರದಲ್ಲಿ ನಾಗಾಭರಣ ಜಯ ಸಾಧಿಸಿದರು. ಸಂಘದ ಉಪಾಧ್ಯಕ್ಷರಾಗಿ ಕೆ.ಸುರೇಶ್ ರೆಡ್ಡಿ ಮತ್ತು ಬಿ.ರಾಮಮೂರ್ತಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಶ್ರೀಪ್ರಸಾದ್ ಹಾಗೂ ಬೂದಾಳ್ ಕೃಷ್ಣ ಮೂರ್ತಿ, ಖಜಾಂಚಿಯಾಗಿ ರಾಜೇಂದ್ರ ಕುಮಾರ್ ಆರ್ಯ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್.ಮಹೇಂದರ್, ಎಸ್.ವಿ.ಪ್ರಸಾದ್, ಕೆ.ವಿ.ರಾಜು,ರಾಜಾರೆಡ್ಡಿ, ಆನಂದ ಪಿ.ರಾಜು, ಕೆ.ಎನ್.ವೈದ್ಯನಾಥ್, ತಿಪಟೂರು ರಘು, ಪಿ.ಎಚ್. ವಿಶ್ವನಾಥ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ನಿರ್ದೇಶಕರಾದ ಕೂಡ್ಲು ರಾಮಕೃಷ್ಣ, ಎಸ್.ನಾರಾಯಣ್ ಹಾಜರಿದ್ದರು.
(ಇನ್ಫೋ ವಾರ್ತೆ)