Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಅಭಿಮಾನಿಯಿಂದ 'ಸಿಂಹ ಗರ್ಜನೆ' ಪುಸ್ತಕ
ಬೆಂಗಳೂರಿನ ಭುವಲ್ಕ ಗ್ರೂಪ್ ಆಫ್ ಕಂಪನೀಸ್ ನ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಅವರ ಆಪ್ತ ಸಹಾಯಕರಾಗಿರುವ ಜನಾರ್ಧನ ರಾವ್ ಸಾಳಂಕೆಯವರು ವಿಷ್ಣು ಅವರ ಮೇಲಿನ ಅಭಿಮಾನವನ್ನು 'ಮರೆಯದ ಮಾಣಿಕ್ಯ - ಯಜಮಾನ ಡಾ.ವಿಷ್ಣುವರ್ಧನ್' ಎಂಬ ಪುಸ್ತಕ ತರುವ ಮುಖಾಂತರ ವ್ಯಕ್ತಪಡಿಸಿದ್ದರು. ಈ ಹೊತ್ತಗೆ ಕಳೆದ ವರ್ಷ ಸೆಪ್ಟೆಂಬರ್ 15ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗಿತ್ತು.
ಆ ಪುಸ್ತಕದ ಯಶಸ್ಸಿನಿಂದ ಉತ್ತೇಜಿತರಾಗಿರುವ ಸಾಳಂಕೆ 'ಸಿಂಹ ಗರ್ಜನೆ' ಎಂಬ ಇನ್ನೊಂದು ಪುಸ್ತಕವನ್ನು ಹೊರತಂದಿದ್ದಾರೆ. ಡಿಸೆಂಬರ್ 30ರ 2009ರಂದು ಸಾಹಸಸಿಂಹ ವಿಷ್ಣುವರ್ಧನ್ ಕಾಲವಾದ ನಂತರ 2011ರ ಡಿಸೆಂಬರ್ 30ರವರೆಗೆ ವಿಷ್ಣು ಕುರಿತಾಗಿ ಜರುಗಿದ ಎಲ್ಲ ಬೆಳವಣಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಿರುವುದಾಗಿ ಒನ್ಇಂಡಿಯಾ ಕನ್ನಡ ಪೋರ್ಟಲ್ಗೆ ಸಾಳಂಕೆ ತಿಳಿಸಿದ್ದಾರೆ.
ಇದರಲ್ಲಿ ಇನ್ನೂ ಯಥಾಸ್ಥಿತಿ ಕಾಯ್ದುಕೊಂಡಿರುವ ವಿಷ್ಣು ಸ್ಮಾರಕ, ಉದ್ಯಾನವನ ಕುರಿತು ತಮ್ಮ ಅನಿಸಿಕೆಗಳನ್ನು ಸಾಳಂಕೆ ಹಂಚಿಕೊಂಡಿದ್ದಾರೆ. ಅಲ್ಲದೆ, ಚಿತ್ರರಂಗದ ಪ್ರಮುಖ ಕಲಾವಿದರ ಸಂದರ್ಶನಗಳನ್ನು ಪುಸ್ತಕ ಒಳಗೊಂಡಿರುತ್ತದೆ. ಒಟ್ಟಿನಲ್ಲಿ ವಿಷ್ಣು ಅವರ ಚಿತಾಭಸ್ಮವನ್ನು ಶೇಖರಿಸಿಟ್ಟುಕೊಂಡು ತಮ್ಮ ಅಭಿಮಾನವನ್ನು ಮೆರೆದಿರುವ ಸಾಳಂಕೆ ಅವರಿಂದ ವಿಷ್ಣುವರ್ಧನ್ ಅಭಿಮಾನಿಗಳಿಗೆ ಓದಲು ಮತ್ತೊಂದು ಸಮೃದ್ಧ ಹೊತ್ತಗೆ ಹೊರಬರಲಿದೆ.