Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರ ವಿಷ್ಣು ಸ್ಮಾರಕ ನಿರ್ಮಿಸಲು ದೇವೇಗೌಡ ಒತ್ತಾಯ
ಅಭಿನಯಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಅಭಿಮಾನ್ ಸ್ಟುಡಿಯೋದಲ್ಲೇ ನಿರ್ಮಿಸಬೇಕು. ಸ್ಮಾರಕ ನಿರ್ಮಿಸಲು ಉಂಟಾಗಿರುವ ತೊಡಕುಗಳನ್ನು ಪರಿಹರಿಸಿ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕವನ್ನು ನಿರ್ಮಿಸಲು ಸರ್ಕಾರ ಮುಂದಾಗ ಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ.
ಬೆಂಗಳೂರಿನ ಪ್ರಶಾಂತನಗರದಲ್ಲಿ ಅಭಿನಯಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ನೂತನವಾಗಿ ನಿರ್ಮಿಸಿರುವ ವಿಷ್ಣುವರ್ಧನ್ ಪುತ್ಥಳಿಯನ್ನು ಬಿಡುಗಡೆ ಮಾಡುತ್ತಾ ದೇವೇಗೌಡರು ಮಾತನಾಡುತ್ತಿದ್ದರು. ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಭಾವನಾತ್ಮಕ ಪ್ರಶ್ನೆ. ಅದನ್ನು ಯಾವುದೇ ಕಾರಣಕ್ಕೂ ಮೈಸೂರಿನಲ್ಲಿ ನಿರ್ಮಿಸಬಾರದು ಎಂದರು.
ಸ್ಮಾರಕಕ್ಕೆ ಸರಕಾರ ಈಗಾಗಲೆ ರು.5 ಕೋಟಿಯನ್ನು ಬಿಡುಗಡೆ ಮಾಡಿದೆ. ಹತ್ತು ಕೋಟಿ ಆದರೂ ಪರ್ವಾಗಿಲ್ಲ ಸ್ಮಾರಕವನ್ನು ಮಾತ್ರ ಅಭಿಮಾನ್ ಸ್ಟುಡಿಯೋದಲ್ಲಿಯೇ ನಿರ್ಮಿಸಬೇಕು. ಸ್ಮಾರಕ ಸ್ಥಾಪನೆಗೆ ಸರಕಾರ ಅನುಸರಿಸುತ್ತಿರುವ ವಿಳಂಬ ನೀತಿ ಸರಿಯಲ್ಲ. ಈ ಸಂಬಂಧ ಸಿಎಂಗೆ ಪತ್ರ ಬರೆಯಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಗೌಡರಿಗೆ ಒಂದು ಪ್ರಶ್ನೆ ತೂರಿಬಂತು, ಚಿಕ್ಕಮಗಳೂರು ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ಮಹಾನ್ ಕಲಾವಿದ ವಿಷ್ಣುವರ್ಧನ್ ಅವರ ಸ್ಮರಣೆಯ ಈ ಸಂದರ್ಭದಲ್ಲಿ ರಾಜಕೀಯ ಮಾತನಾಡುವುದಿಲ್ಲ ಎಂದರು. ಸಮಾರಂಭದಲ್ಲಿ ನಟ ಅನಿರುದ್ಧ್ ಉಪಸ್ಥಿತರಿದ್ದರು.
ಅಭಿಮಾನ್ ಸ್ಟುಡಿಯೋದಲ್ಲಿನ ವಿಷ್ಣು ಸ್ಮಾರಕದ ಜಾಗ ಕೌಟುಂಬಿಕ ವ್ಯಾಜ್ಯಗಳಿಗೆ ಸಿಲುಕಿದ್ದು ಅದು ಶೀಘ್ರ ಪರಿಹಾರವಾಗುವ ಸೂಚನೆಗಳಿಲ್ಲ. ಹಾಗಾಗಿ ತಾವು ವಿಷ್ಣು ಸ್ಮಾರಕವನ್ನು ಮೈಸೂರಿನಲ್ಲಿ ಸ್ಥಾಪಿಸುತ್ತೇನೆ ಎಂದು ಭಾರತಿ ವಿಷ್ಣುವರ್ಧನ್ ಕೆಲ ದಿನಗಳ ಹಿಂದೆ ಹೇಳಿದ್ದರು. ಈಗ ದೇವೇಗೌಡರ ಅಭಿಮಾನ್ ಸ್ಟುಡಿಯೋದಲ್ಲೇ ಸ್ಥಾಪನೆಯಾಗಲಿ ಎಂದಿರುವುದು ವಿಶೇಷ. (ಏಜೆನ್ಸೀಸ್)