Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರ ವಿಷ್ಣು ಸ್ಮಾರಕ ನಿರ್ಮಿಸಲು ದೇವೇಗೌಡ ಒತ್ತಾಯ
ಅಭಿನಯಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಅಭಿಮಾನ್ ಸ್ಟುಡಿಯೋದಲ್ಲೇ ನಿರ್ಮಿಸಬೇಕು. ಸ್ಮಾರಕ ನಿರ್ಮಿಸಲು ಉಂಟಾಗಿರುವ ತೊಡಕುಗಳನ್ನು ಪರಿಹರಿಸಿ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕವನ್ನು ನಿರ್ಮಿಸಲು ಸರ್ಕಾರ ಮುಂದಾಗ ಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ.
ಬೆಂಗಳೂರಿನ ಪ್ರಶಾಂತನಗರದಲ್ಲಿ ಅಭಿನಯಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ನೂತನವಾಗಿ ನಿರ್ಮಿಸಿರುವ ವಿಷ್ಣುವರ್ಧನ್ ಪುತ್ಥಳಿಯನ್ನು ಬಿಡುಗಡೆ ಮಾಡುತ್ತಾ ದೇವೇಗೌಡರು ಮಾತನಾಡುತ್ತಿದ್ದರು. ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಭಾವನಾತ್ಮಕ ಪ್ರಶ್ನೆ. ಅದನ್ನು ಯಾವುದೇ ಕಾರಣಕ್ಕೂ ಮೈಸೂರಿನಲ್ಲಿ ನಿರ್ಮಿಸಬಾರದು ಎಂದರು.
ಸ್ಮಾರಕಕ್ಕೆ ಸರಕಾರ ಈಗಾಗಲೆ ರು.5 ಕೋಟಿಯನ್ನು ಬಿಡುಗಡೆ ಮಾಡಿದೆ. ಹತ್ತು ಕೋಟಿ ಆದರೂ ಪರ್ವಾಗಿಲ್ಲ ಸ್ಮಾರಕವನ್ನು ಮಾತ್ರ ಅಭಿಮಾನ್ ಸ್ಟುಡಿಯೋದಲ್ಲಿಯೇ ನಿರ್ಮಿಸಬೇಕು. ಸ್ಮಾರಕ ಸ್ಥಾಪನೆಗೆ ಸರಕಾರ ಅನುಸರಿಸುತ್ತಿರುವ ವಿಳಂಬ ನೀತಿ ಸರಿಯಲ್ಲ. ಈ ಸಂಬಂಧ ಸಿಎಂಗೆ ಪತ್ರ ಬರೆಯಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಗೌಡರಿಗೆ ಒಂದು ಪ್ರಶ್ನೆ ತೂರಿಬಂತು, ಚಿಕ್ಕಮಗಳೂರು ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ಮಹಾನ್ ಕಲಾವಿದ ವಿಷ್ಣುವರ್ಧನ್ ಅವರ ಸ್ಮರಣೆಯ ಈ ಸಂದರ್ಭದಲ್ಲಿ ರಾಜಕೀಯ ಮಾತನಾಡುವುದಿಲ್ಲ ಎಂದರು. ಸಮಾರಂಭದಲ್ಲಿ ನಟ ಅನಿರುದ್ಧ್ ಉಪಸ್ಥಿತರಿದ್ದರು.
ಅಭಿಮಾನ್ ಸ್ಟುಡಿಯೋದಲ್ಲಿನ ವಿಷ್ಣು ಸ್ಮಾರಕದ ಜಾಗ ಕೌಟುಂಬಿಕ ವ್ಯಾಜ್ಯಗಳಿಗೆ ಸಿಲುಕಿದ್ದು ಅದು ಶೀಘ್ರ ಪರಿಹಾರವಾಗುವ ಸೂಚನೆಗಳಿಲ್ಲ. ಹಾಗಾಗಿ ತಾವು ವಿಷ್ಣು ಸ್ಮಾರಕವನ್ನು ಮೈಸೂರಿನಲ್ಲಿ ಸ್ಥಾಪಿಸುತ್ತೇನೆ ಎಂದು ಭಾರತಿ ವಿಷ್ಣುವರ್ಧನ್ ಕೆಲ ದಿನಗಳ ಹಿಂದೆ ಹೇಳಿದ್ದರು. ಈಗ ದೇವೇಗೌಡರ ಅಭಿಮಾನ್ ಸ್ಟುಡಿಯೋದಲ್ಲೇ ಸ್ಥಾಪನೆಯಾಗಲಿ ಎಂದಿರುವುದು ವಿಶೇಷ. (ಏಜೆನ್ಸೀಸ್)