Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ... ವರನಟ ಡಾ.ರಾಜ್ ಕಿಡ್ನಾಪ್ ಸ್ಟೋರಿ
ಕನ್ನಡ ಚಿತ್ರಪ್ರೇಮಿಗಳ ಕರಾಳ ನೆನಪುಗಳಲ್ಲಿ ಅಚ್ಚಳಿಯದೇ ಉಳಿದ ಪುಟಗಳು ವರನಟ ಡಾ.ರಾಜ್ ಅಪಹರಣ. ಈ ಸತ್ಯ ಘಟನೆಗಳ ಆಧಾರವಾಗಿ ಹೆಣೆದಿರುವ ಚಿತ್ರ 'ಅಟ್ಟಹಾಸ' ತೆರೆಗೆ ಬರಲು ಸಿದ್ಧವಾಗಿದೆ. ಎಎಂಆರ್ ನಿರ್ದೇಶನದ ಈ ಚಿತ್ರದ ವಿಶೇಷ ಪಾತ್ರದಲ್ಲಿ ಅರ್ಜುಜ್ ಸರ್ಜಾ ಅಭಿನಯಿಸಿದ್ದಾರೆ. ವೀರಪ್ಪನ್ ಆಗಿ ಕಿಶೋರ್ ಮೀಸೆ ತಿರುವಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರ ಪಾತ್ರವನ್ನು ಸುರೇಶ್ ಒಬೆರಾಯ್ ಪೋಷಿಸಿದ್ದಾರೆ.
ವೀರಪ್ಪನ್ ಪತ್ನಿಯಾಗಿ ಮುತ್ತು ಲಕ್ಷ್ಮಿ ಪಾತ್ರವನ್ನು ಲಕ್ಷ್ಮಿ ರೈ ಪೋಷಿಸಿದ್ದಾರೆ. ಎಎಂಆರ್ ರಮೇಶ್ ಅವರು ಸತತ ಹತ್ತು ವರ್ಷಗಳ ಕಾಲ ಕಷ್ಟಪಟ್ಟು ಮಾಹಿತಿ ಕಲೆಹಾಕಿ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ರಮೇಶ್ ಅವರ ಸೈನೇಡ್, ಪೊಲೀಸ್ ಕ್ವಾಟ್ರಸ್ ಚಿತ್ರಗಳು ಉತ್ತಮ ನಿರೂಪಣೆಯಿಂದ ಕೂಡಿದ್ದವು. ಹಾಗಾಗಿ ಅಟ್ಟಹಾಸ ಚಿತ್ರವನ್ನು ನಿರೀಕ್ಷಿಸುವಂತಾಗಿದೆ.
ಮೂರು ದಶಕಗಳ ಕಾಲ ವೀರಪ್ಪನ್ ನಡೆಸಿದ ಅಡವಿ ಜೀವನ, ವರನಟ ದಿವಂಗತ ಡಾ.ರಾಜ್ ಕುಮಾರ್ ಕಿಡ್ನಾಪ್ನ ಯಥಾವತ್ ಘಟನೆಗಳ ಆಧಾರವಾಗಿ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆ. ತೀವ್ರ ಸಂಚನಕ್ಕೆ ಕಾರಣವಾಗಿದ್ದ ರಾಜ್ ಕಿಡ್ನಾಪ್ ಕುರಿತ ಚಿತ್ರವನ್ನು ಬೆಳ್ಳಿತೆರೆಗೆ ತರುತ್ತಿರುವುದು ಇದೇ ಮೊದಲು. (ಏಜೆನ್ಸೀಸ್)