Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆ.17ರ ವಿಷ್ಣು ಸಿಂಹಾವಲೋಕನದಲ್ಲಿ ಬದಲಾವಣೆ
ಸಾಹಸಸಿಂಹ ವಿಷ್ಣುವರ್ಧನ್ ನೆನಪಿನಲ್ಲಿ ನಡೆಯುತ್ತಿರುವ ವಿಷ್ಣು ಚಿತ್ರೋತ್ಸವದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಸೆಪ್ಟೆಂಬರ್ 17ರಿಂದ ಸೆಪ್ಟೆಂಬರ್ 19ರವರೆಗೆ ವಿಷ್ಣು ಚಿತ್ರೋತ್ಸವ ಮೂರು ದಿನಗಳ ಕಾಲ ನಡೆಯಲಿದೆ. ಚಿತ್ರೋತ್ಸವವನ್ನು ಐನಾಕ್ಸ್, ಗರುಡಾ ಮಾಲ್ ನಂತಹ ಪ್ರದೇಶಗಳಲ್ಲಿ ನಡೆಸುವುದರಿಂದ ಸಾಮಾನ್ಯ ಜನಕ್ಕೆ ಚಿತ್ರಗಳು ತಲುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ಬದಲಾವಣೆಗಳನ್ನು ಮಾಡಲಾಗಿದೆ.
ವಿಷ್ಣು ಚಿತ್ರೋತ್ಸವ ಕುರಿತು ಸಿದ್ಧತೆಗಳನ್ನು ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಕನ್ನಡ ಚಿತ್ರೋದ್ಯಮದಹೃದಯ ಭಾಗ ಗಾಂಧಿನಗರದಲ್ಲಿ ಚಿತ್ರೋತ್ಸವವನ್ನು ಆಚರಿಸುವುದು ಸೂಕ್ತ ಎಂಬ ಸಲಹೆಗಳು ಕೇಳಿಬಂದಿದ್ದವು. ಈ ಮಾತಿಗೆ ಭಾರತಿ ವಿಷ್ಣುವರ್ಧನ್, ಹಿರಿಯ ನಟ ಶಿವರಾಂ ಹಾಗೂ ಅನಿರುದ್ಧ್ ಸಹ ಧ್ವನಿಗೂಡಿಸಿದ್ದರು.
ವಿಷ್ಣು ಚಿತ್ರೋತ್ಸವದಲ್ಲಾದ ಬದಲಾವಣೆಗಳು ಹೀಗಿವೆ...ಕಪಾಲಿ ಚಿತ್ರಮಂದಿರದಲ್ಲಿ ಸೆಪ್ಟೆಂಬರ್ 17ರ ಸಂಜೆ 7.30ಕ್ಕೆ 'ಭೂತಯ್ಯನ ಮಗ ಅಯ್ಯು'; ಸೆಪ್ಟೆಂಬರ್ 18ರ ಸಂಜೆ 7.30ಕ್ಕೆ 'ನಾಗರಹಾವು' ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರಸನ್ನ ಚಿತ್ರಮಂದಿರದಲ್ಲಿ ಸೆಪ್ಟೆಂಬರ್ 18ರ ಸಂಜೆ 7.30ಕ್ಕೆ 'ಬಂಧನ' ಚಿತ್ರ ಪ್ರದರ್ಶಿಸಲಾಗುತ್ತದೆ.
ಪ್ರದರ್ಶನದ ದಿನದಂತೆ ಕಪಾಲಿ ಹಾಗೂ ಪ್ರಸನ್ನ ಚಿತ್ರಮಂದಿರಗಳಲ್ಲಿ ಉಚಿತ ಪಾಸುಗಳನ್ನು ನೀಡಲಾಗುತ್ತದೆ. ಒಬ್ಬರಿಗೆ ಒಂದು ಪಾಸು ಮಾತ್ರ. ಮೊದಲು ಬಂದವರಿಗೆ ಮೊದಲ ಆದ್ಯತೆ. ಸೆಪ್ಟೆಂಬರ್ 14ರಿಂದ ಐನಾಕ್ಸ್ ಚಿತ್ರಮಂದಿರದಲ್ಲಿ ಉಚಿತ ಪಾಸುಗಳನ್ನು ನೀಡಲಾಗುತ್ತಿದೆ. ವಿಷ್ಣು ಚಿತ್ರೋತ್ಸವ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಪುಟ ಕ್ಲಿಕ್ಕಿಸಿ!