Don't Miss!
- News ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಅಪಪ್ರಚಾರ:ಕೆ ಸುಧಾಕರ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲೆ ಮಾದೇಶ್ವರನ ಸನ್ನಿಧಿಯಲ್ಲಿ ಕರಿ ಚಿರತೆ
ಮುಗ್ಧ ಶಿವಲಿಂಗು ಪಾತ್ರದಿಂದ ಕನ್ನಡಿಗರ ಮನದಲ್ಲಿ ನೆಲೆಯೂರಿದ್ದ ವಿಜಯ್ ಈಗ ದುಷ್ಟರನ್ನು ಬೇಟೆಯಾಡುವ 'ಕರಿ ಚಿರತೆ'ಯಾಗಿ ಸಾಹಸ ಪ್ರಿಯರ ಮನ ತಣಿಸಲು ಅಣಿಯಾಗುತ್ತಿದ್ದಾರೆ. ಮೋಹನ ಕುಮಾರ.ಎನ್. ಅರ್ಪಿಸಿ ಮೋಹನ ಪ್ರೊಡಕ್ಷನ್ಸ್ ಲಾಛನದಲ್ಲಿ ಕೃಷ್ಣಯ್ಯ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗಜ ಹಾಗೂ ಪ್ರೀತ್ಸೆ ಪ್ರೀತ್ಸೆ ನಿರ್ದೇಶಿಸಿದ್ದ ಕೆ. ಮಾದೇಶ್ ಕ್ಯಾಪ್ಟನ್ ಆಗಿದ್ದಾರೆ.
ಜೂನ್ 19 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭಿಸಿದ್ದು, ಕಳೆದ ವಾರ ಮಲೆ ಮಾದೇಶ್ವರ ಸ್ವಾಮಿ ಬೆಟ್ಟದಲ್ಲಿ ಹಾಡೊಂದನ್ನು 4 ದಿನಗಳ ಕಾಲ ಚಿತ್ರೀಕರಿಸಲಾಯಿತು. ಮಾದೇಶ್ವರ ಸ್ವಾಮಿಯನ್ನು ನಾಯಕ ವಿಜಯ್ ವೀರಾವೇಶದಿಂದ ಹಾಡಿ ಹೊಗಳುವ ಈ ಹಾಡಿನ ಚಿತ್ರೀಕರಣದಲ್ಲಿ ಡೋಲು, ಡೊಳ್ಳು ಕುಣಿತ, ವೀರಗಾಸೆ ತಾಳ, ಮದ್ದಲೆ, ಕಲಾವಿದರ ಜೊತೆಗೆ 100 ಜನ ನೃತ್ಯ ಕಲಾವಿದರೂ ಭಾಗವಹಿಸಿದರು.
ಪರಿಚಯ ಚಿತ್ರದ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದ ರಾಮು ಈ ಹಾಡಿಗೆ ನೃತ್ಯ ನಿರ್ದೇಶಕರಾಗಿದ್ದಾರೆ. ವಿಜಯ ಅಭಿನಯಿಸಿದ್ದಾರೆ. ಸಾಧುಕೋಕಿಲ ಅವರ ಸಂಗೀತ ಸಂಯೋಜನೆ, ಎಂ.ಆರ್. ಸೀನು ಅವರ ಛಾಯಾಗ್ರಹಣ, ಪಳನಿರಾಜ್ರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)