Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಮಾಯಾಂಗನೆ ಕಾಜಲ್ ಅಗರವಾಲ್
ದಕ್ಷಿಣ ಭಾರತದಲ್ಲಿ ಸದ್ಯಕ್ಕೆ ಬಲು ಬೇಡಿಕೆಯಲ್ಲಿರುವ ನಟಿಯಲ್ಲಿ ಕಾಜಲ್ ಅವರವಾಲ್ ಸಹ ಒಬ್ಬರು. ಆಕರ್ಷಕ ಮೈಮಾಟ, ಚಿಗರೆ ಕಂಗಳ ಚೆಲುವೆ ಕಾಜಲ್ ಅಗರವಾಲ್ ಕನ್ನಡಕ್ಕೆ ಅಡಿಯಿಡುತ್ತಿದ್ದಾರೆ. ತೆಲುಗು ಹಾಗೂ ತಮಿಳಿನಲ್ಲಿ ಪ್ರಕಾಶಿಸುತ್ತಿರುವ ಕಾಜಲ್ ಇನ್ನು ಮುಂದೆ ಕನ್ನಡದಲ್ಲಿ ಮಿಂಚಲಿದ್ದಾರೆ.
ಕಾಜಲ್ ಅಗರವಾಲ್ ರನ್ನು ಕನ್ನಡಕ್ಕೆ ಕರೆತರುತ್ತಿರುವವರು ನಿರ್ದೇಶಕ ರಘು ಹಾಸನ್. ಅವರು ಚೊಚ್ಚಲ ನಿರ್ದೇಶನದ ಚಿತ್ರ 'ತಥಾಸ್ತು' ಈಗಾಗಲೆ ಆರಂಭವಾಗಿದೆ. ಈ ಚಿತ್ರದಲ್ಲಿ ನಟಿಸಲು ಕಾಜಲ್ ಒಪ್ಪಿರುವುದಾಗಿ ತಿಳಿಸಿದ್ದಾರೆ. ಶೀಘ್ರದಲ್ಲೆ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ರಘು ಹಾಸನ್ ತಿಳಿಸಿದ್ದಾರೆ.
ಕಾಜಲ್ ಅಗರವಾಲ್ ಅಥವಾ ಸೋನಂ ಕಪೂರ್ ಅವರನ್ನು ಕರೆತರಬೇಕೆಂದುಕೊಂಡಿದ್ದೆವು. ಕಾಜಲ್ ಅವರನ್ನು ಭೇಟಿಯಾದಾಗ ಆಕೆ ತಮ್ಮ ಚಿತ್ರದಲ್ಲಿ ನಟಿಸುವುದಾಗಿ ತಿಳಿಸಿದ್ದಾರೆ. ಎಲ್ಲವೂ ಒಂದು ಹಂತಕ್ಕೆ ಬಂದ ಬಳಿಕ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸುವುದಾಗಿ ರಘು ಹೇಳಿದ್ದಾರೆ.
ಅಂದಹಾಗೆ ಈ ಚಿತ್ರಕ್ಕೆ ನಾಯಕ ನಟ ಚಿರಾಗ್. ಅಣಜಿ ನಾಗರಾಜ್ ನಿರ್ಮಿಸುತ್ತಿರುವ ತಥಾಸ್ತು ಚಿತ್ರ ಜುಲೈ 9ರಂದು ಚಿತ್ರ ಸೆಟ್ಟೇರಿದೆ. ಸದ್ಯಕ್ಕೆ ಕಾಜಲ್ ಅಗರವಾಲ್ ಮೂರು ತೆಲುಗು ಹಾಗೂ ಎರಡು ತಮಿಳು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದಲ್ಲಿ ಈ ಮಾಯಾಂಗನೆಯ ಜಾದೂ ಹೇಗಿರುತ್ತದೆ ಎಂದು ಕಾದು ನೋಡಬೇಕು.