Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೇಕಡವಾರು ಪದ್ಧತಿಗೆ ಫಿಲಂ ಚೇಂಬರ್ ಅಸ್ತು!
ಹಂಚಿಕೆ ವಿಚಾರವಾಗಿ ಕನ್ನಡ ಚಲನಚಿತ್ರ ನಿರ್ಮಾಪಕರು ಮತ್ತು ಚಿತ್ರಮಂದಿರ ಮಾಲೀಕರ ನಡುವಿನ ಗುದ್ದಾಟಕ್ಕೆ ಇಂದು ತೆರೆ ಬಿದ್ದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಸ್ಥಿಕೆಯಲ್ಲಿ ಸೋಮವಾರ (ನ.16) ನಡೆದ ಸಭೆಯಲ್ಲಿ ಶೇಕಡವಾರು ಪದ್ಧತಿಯನ್ನು ಅಂಗೀಕರಿಸಲಾಯಿತು.
ಶೇಕಡವಾರು ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿ ಎಂಬುದು ನಿರ್ಮಾಪಕರ ಒತ್ತಾಯವಾಗಿತ್ತು. ಇದಕ್ಕೆ ಚಿತ್ರಮಂದಿರದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಾಡಿಗೆ ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದರು. ಕೆಎಫ್ ಸಿಸಿ ಮಧ್ಯಸ್ಥಿಕೆಯಲ್ಲಿ ಕಗ್ಗ್ಗಂಟಾಗಿದ್ದ ಸಮಸ್ಯೆ ಇದೀಗ ಬಗೆಹರಿದಿದೆ. ಶೇಕಡವಾರು ಪದ್ಧತಿಗೆ ಅತ್ತ ಚಿತ್ರಮಂದಿರದ ಮಾಲೀಕರು ಇತ್ತ್ತ ನಿರ್ಮಾಪಕರ ಸಂಘ ಒಪ್ಪಿಗೆ ಸೂಚಿಸಿದೆ.
ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಮತ್ತು ಬೇರೆ ಭಾಷೆಯ ಚಿತ್ರಗಳಿಗೂ ಶೇಕಡವಾರು ಪದ್ಧತಿ ಅನ್ವಯವಾಗಲಿದೆ. ಬಾಡಿಗೆ ಪದ್ಧತಿಗೆ ನಿರ್ಮಾಪಕರು ಮತ್ತು ಚಿತ್ರ ಪ್ರದರ್ಶಾಕರರು ಗುಡ್ ಬೈ ಹೇಳಿರುವುದಾಗಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಜೋಸೈಮನ್ ತಿಳಿಸಿದ್ದಾರೆ.
ಮುಂದಿನ ವಾರ ಕಲಾವಿದರು, ನಿರ್ದೇಶಕರು, ನಿರ್ಮಾಪಕರ ಸಂಘದ ಸಭೆ ಕರೆಯಲಾಗಿದೆ. ಶೇಕಡವಾರು ಕ್ರಮವನ್ನು ಮುಖ್ಯವಾಗಿ ಬಿ ಮತ್ತು ಸಿ ಕೇಂದ್ರಗಳಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ತಿಳಿಸಿದ್ದಾರೆ.
ಒಂದು ವೇಳೆ ಈ ಸಮಸ್ಯೆ ಬಗೆಹರಿಯದಿದ್ದ ಪಕ್ಷದಲ್ಲಿ ಜನವರಿ 1ರಿಂದ ಕನ್ನಡ ಸೇರಿದಂತೆ ಯಾವ ಭಾಷೆಯ ಚಿತ್ರಗಳನ್ನು ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ನಿರ್ಮಾಪಕ ಸಂಘ ಎಚ್ಚರಿಸಿತ್ತು. ಬಾಡಿಗೆ ಪದ್ಧತಿಯಲ್ಲಿ ಚಿತ್ರಗಳು ಬಿಡುಗಡೆಯಾದರೆ ನಿರ್ಮಾಪಕರಿಗೆ ನಷ್ಟವಾಗುತ್ತದೆ. ಹಾಗಾಗಿ ಶೇಕಡವಾರು ಪದ್ಧತಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿ ಎಂಬುದು ನಿರ್ಮಾಪಕರ ಪ್ರಮುಖ ಅಹವಾಲಾಗಿತ್ತು. ಒಟ್ಟಿನಲ್ಲಿ ನಿರ್ಮಾಪಕರ ಬೇಡಿಕೆಗೆ ಜಯ ಸಿಕ್ಕಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)