Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಸಂಘಕ್ಕೆ ಕೆಸಿಎನ್ ರಾಜೀನಾಮೆಗೆ ಏನು ಕಾರಣ?
ಕರ್ನಾಟಕ ಚಲನಚಿತ್ರ ರಂಗದ ಹಿರಿಯ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕರಾದ ಕೆಸಿಎನ್ ಚಂದ್ರಶೇಖರ್ ಅವರು ವೈಯಕ್ತಿಕ ಕಾರಣ ಕೊಟ್ಟು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆನೀಡಿದ್ದಾರೆ. ಆದರೆ, ನಿಜವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ ನಿರ್ಮಾಪಕರ ಸಂಘದ ಪೀಠಕ್ಕೆ ಜಗ್ಗೇಶ್ ಅವರು ಭಾರಿ ಲಾಬಿ ನಡೆಸಿದ್ದು, ಚುನಾವಣೆಯೂ ಇಲ್ಲದೆ ಅವಿರೋಧವಾಗಿ ಆಯ್ಕೆ ಆಗುವ ಸಂಭವವೇ ಹೆಚ್ಚು ಎನ್ನಲಾಗಿದೆ.
ಹಿರಿಯ ನಿರ್ಮಾಪಕ ಕೆಸಿಎನ್ ಅವರು ಅಧ್ಯಕ್ಷ ಸ್ಥಾನದಲ್ಲಿರುವ ವರೆಗೂ ಚುನಾವಣೆ ಸಾಧ್ಯವಿಲ್ಲ ಎಂಬುದನ್ನು ಅರಿತ ಒಂದು ಬಣ, ಒತ್ತಡ ಹೇರಲಾರಂಭಿಸಿತ್ತು. ಜಗ್ಗೇಶ್ ಗೆ ಪೈಪೋಟಿ ನೀಡಲು ಮುನಿರತ್ನ ಸಿದ್ದತೆ ನಡೆಸಿದ್ದರು. ಐದು ವರ್ಷಗಳ ನಂತರ ಸಂಘಕ್ಕೆ ಹೊಸಬರ ಅವಶ್ಯಕತೆ ಇದೆ ಅಲ್ಲದೆ ಕೆಸಿಎನ್ ಅವರ ಅಧಿಕಾರವಧಿ ಮುಗಿದಿದೆ ಹಾಗಾಗಿ ಚುನಾವಣೆ ನಡೆಸುವುದು ಅನಿವಾರ್ಯ ಎಂದು ಮುನಿರತ್ನ ಬಣ ಆಗ್ರಹಿಸತೊಡಗಿತ್ತು.
ಇತ್ತೀಚೆಗೆ ನಡೆದ ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಕೆಸಿಎನ್ ಚಂದ್ರು, ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಿ ಹೊರಬಿದ್ದಿದ್ದಾರೆ. ದಕ್ಷಿಣ ಭಾರತ ಫಿಲ್ಮಂ ವಾಣಿಜ್ಯ ಮಂಡಳಿಗೆ ಎರಡೆರಡು ಬಾರಿ ಕೆಸಿಎನ್ ಅಧ್ಯಕ್ಷರಾಗಿದ್ದರು. ಸುಮಾರು 700ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ. 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ರೇಷ್ಮೆ ಉದ್ಯಮಿಯೂ ಆಗಿರುವ ಚಂದ್ರು, ಸಿನಿಮಾ ಸಂಘ ಬಿಡಲು ಯಾರು ಏನು ಎಂದು ಯಾರೂ ತಲೆ ಕೆಡಿಸಿಕೊಂಡಿಲ್ಲ.