Don't Miss!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಿಯಾಂಕ್ ಖರ್ಗೆ ವಿರುದ್ಧ ನಟಿ ರಮ್ಯಾ ಸ್ಪರ್ಧೆ
ಗೋಲ್ಡನ್ ಗರ್ಲ್ ರಮ್ಯಾ ರಾಜ್ಯ ಯುವ ಕಾಂಗ್ರೆಸ್ ಚುನಾವಣಾ ಕಣಕ್ಕಿಳಿದಿರುವುದು ಸಮಸ್ತ ಕನ್ನಡಿಗರಿಗೂ ಗೊತ್ತಿರುವ ಸಂಗತಿ. ಈ ಚುನಾವಣೆಯಲ್ಲಿ ರಮ್ಯಾಗೆ ಪ್ರಬಲ ಸ್ಪರ್ಧೆ ಎದುರಾಗಿದೆ. ಬೂತ್ ಮಟ್ಟದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ರಮ್ಯಾಗೆ ಎದುರಾಳಿ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಪುತ್ರ ಪ್ರಿಯಾಂಕ್ ಖರ್ಗೆ. ಸಖತ್ ಫೈಟ್ ನಿರೀಕ್ಷಿಸಲಾಗಿದೆ.
ಈ ಮೂಲಕ ರಾಜ್ಯ ಯುವ ಕಾಂಗ್ರೆಸ್ ಚುನಾವಣಾ ಕಣದಲಿ ರಂಗಿನಾಟಕ್ಕೆ ವೇದಿಕೆ ಸಿದ್ಧವಾಗಿದೆ. ಸೆ.16 ರಿಂದ 21ರವರೆಗೆ ರಾಜ್ಯದಲ್ಲಿ ಯುವ ಕಾಂಗ್ರೆಸ್ ಚುನಾವಣೆ ನಡೆಯಲಿದೆ. "ಮೊದಲು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಬಳಿಕ ನೋಡೋಣ ಅಧ್ಯಕ್ಷ ಸ್ಥಾನ ತಮಗೆ ಎಷ್ಟರ ಮಟ್ಟಿಗೆ ಫಿಟ್ ಆಗುತ್ತೆ" ಎಂದು ಚುಟುಕು ಉತ್ತರ ನೀಡಿದ್ದಾರೆ ರಮ್ಯಾ.
ಸೆ.16ರಂದು ನಡೆಯಲಿರುವ ಬೂತ್ ಮಟ್ಟದ ಚುನಾವಣೆಗೆ ತಾನು ಸ್ಪರ್ಧಿಸುತ್ತಿದ್ದೇನೆ. ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಇದನ್ನು ಸೂಕ್ತ ವೇದಿಕೆಯಾಗಿ ಬಳಸಿಕೊಂಡು ಜನಕ್ಕೆ ತಮ್ಮ ಕೈಲಾದ ಸಹಾಯ ಮಾಡುತ್ತೇನೆ. ಶಾಂತಿನಗರದ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂಬ ವಿಶ್ವಾಸವನ್ನು ರಮ್ಯಾ ವ್ಯಕ್ತಪಡಿಸಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)