Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣ ವೇಳೆ ಮಂಡ್ಯದಲ್ಲಿ ನಟ ಸುದೀಪ್ ಗೆ ಗಾಯ
'ಕೆಂಪೇಗೌಡ' ಚಿತ್ರೀಕರಣದ ವೇಳೆ ನಟ ಸುದೀಪ್ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ತೈಲೂರಿನಲ್ಲಿ ಗುರುವಾರ ಮಧ್ಯಾಹ್ನ (ಡಿ.16) ನಡೆದಿದೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಬಾಂಬ್ ಸ್ಪೋಟಿಸುವ ವೇಳೆ ಈ ಅವಘಡ ಸಂಭವಿಸಿದೆ.
ಚಿತ್ರೀಕರಣಕ್ಕಾಗಿ ಸ್ಫೋಟಿಸಿದ ಬಾಂಬ್ನಿಂದ ಸುದೀಪ್ ನಾಲ್ಕು ಅಡಿ ದೂರದಲ್ಲಿದ್ದರು. ಸ್ಫೋಟದ ರಭಸಕ್ಕೆ ಸುದೀಪ್ ಅವರ ಬಲ ಮೊಣಕಾಲಿನ ಚಿಪ್ಪು ಹಾಗೂ ಬೆನ್ನಿಗೆ ಸುಟ್ಟ ಗಾಯಗಳಾಗಿವೆ. ಸುದೀಪ್ ಅಭಿಮಾನಿಗಳು ಗಾಬರಿ ಬೀಳುವಂತಹದ್ದೇನು ಅವರಿಗೆ ಆಗಿಲ್ಲ ಎಂದು ಚಿತ್ರದ ನಿರ್ಮಾಪಕ ಶಂಕರೇಗೌಡ ತಿಳಿಸಿದ್ದಾರೆ.
ಸದ್ಯಕ್ಕೆ ಸುದೀಪ್ ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸುದೀಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಶಂಕರೇಗೌಡ ತಿಳಿಸಿದ್ದಾರೆ. ಚಿತ್ರೀಕರಣ ನಿಲ್ಲಿಸಿದರೆ ತುಂಬಾ ಲಾಸಾಗುತ್ತದೆ ಎಂಬ ಕಾರಣಕ್ಕೆ ಈ ಸನ್ನಿವೇಶವನ್ನು ಮುಗಿಸಿಕೊಡುತ್ತೇನೆ ಎಂದು ಸುದೀಪ್ ಹೇಳಿದ್ದಾಗಿ ನಿರ್ಮಾಪಕರು ಹೇಳಿದ್ದಾರೆ.
ಗೃಹ ಸಚಿವರ ಮಗಳನ್ನು ಅಪಹರಣ ಮಾಡುವ ಸನ್ನಿವೇಶ ಇದಾಗಿತ್ತು. ಎಲ್ಲಾ ಮುನ್ನೆಚ್ಚರಿಕೆಗಳನ್ನು ವಹಿಸಲಾಗಿತ್ತು ಆದರೂ ಚಿತ್ರೀಕರಣದಲ್ಲಿ ಈ ಅವಘಡ ಸಂಭವಿಸಿದೆ ಎಂದಿದ್ದಾರೆ ಶಂಕರೇಗೌಡ. ಮಡಿಕೆಯೊಂದರಲ್ಲಿ ಇಟ್ಟು ಬಾಂಬ್ ಸ್ಫೋಟಿಸುವ ಸನ್ನಿವೇಶ ಇದಾಗಿತ್ತು.
ಈ ಚಿತ್ರದಲ್ಲಿ ಸುದೀಪ್ ಅಭಿನಯಿಸುವುದರ ಜೊತೆಗೆ ಆಕ್ಷನ್, ಕಟ್ ಹೇಳುತ್ತಿದ್ದಾರೆ. ಚಿತ್ರದ ತಾರಾಗಣದಲ್ಲಿ ಅಂಚಲ್ ಸಬರವಾಲ್, ರವಿಶಂಕರ್ ಪಿ ಹಾಗೂ ಉದ್ಯಮಿ ಅಶೋಕ್ ಖೇಣಿ ಅಭಿನಯಿಸಿದ್ದಾರೆ. ತಮಿಳಿನ ಯಶಸ್ವಿ ಚಿತ್ರ 'ಸಿಂಗಂ' ರೀಮೇಕ್ 'ಕೆಂಪೇಗೌಡ'.