Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಫಲಿತಾಂಶದ ದಿನವೇ ಡಿ-ಬಾಸ್ ಪಾಲಿಗೆ ಇನ್ನೊಂದು ವಿಶೇಷ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಭರ್ಜರಿ ಜಯ ಸಾಧಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ದರ್ಶನ್ ಅವರಿಗೆ ಹಾಗೂ ದರ್ಶನ್ ಅಭಿಮಾನಿಗಳಿಗೆ ಇದು ಸಂಭ್ರಮ ತಂದಿದೆ. ಯಾಕಂದ್ರೆ, ಸುಮಲತಾ ಅವರ ಗೆಲುವಿನಲ್ಲಿ ದರ್ಶನ್ ಮತ್ತು ಯಶ್ ಪಾತ್ರವೂ ಇದೆ. ಈ ಇಬ್ಬರು ನಟರು ಸುಮಲತಾ ಗೆಲುವಿಗಾಗಿ ಮಂಡ್ಯದಲ್ಲಿ ಪರೇಡ್ ಮಾಡಿದ್ದಾರೆ.
ಸುಮಲತಾ ಭರ್ಜರಿ ಗೆಲುವು : ದರ್ಶನ್ ಮನೆ ಮುಂದೆ ಅಭಿಮಾನಿಗಳ ಸಂಭ್ರಮ
ಸುಮಲತಾ ಜಯಗೊಳಿಸಿದ್ದಾರೆ ಎಂದು ಫಲಿತಾಂಶ ಹೊರಬೀಳುತ್ತಿದ್ದಂತೆ ಡಿ ಬಾಸ್ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಆದರೆ ದರ್ಶನ್ ಚಿತ್ರೀಕರಣ ನಿಮಿತ್ತ ಪಾಂಡಿಚೇರಿಗೆ ತೆರಳಿದ್ದಾರೆ ಎಂಬ ಮಾಹಿತಿ ಇದೆ.
ಅಂದ್ಹಾಗೆ, ಸುಮಲತಾ ಗೆಲುವಿನ ಜೊತೆಗೆ ದರ್ಶನ್ ಗೆ ಇನ್ನೊಂದು ವಿಶೇಷ ಏನಪ್ಪಾ ಅಂದ್ರೆ, ಡಿ ಬಾಸ್ ಗೆ 'ಚಾಲೆಂಜಿಂಗ್ ಸ್ಟಾರ್' ಎಂದು ಬಿರುದು ನೀಡಿ ಇಂದಿಗೆ 16 ವರ್ಷ ಆಗಿದೆಯಂತೆ. ಈ ಸಂಭ್ರಮವನ್ನ ಕೂಡ ದರ್ಶನ್ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
ಅಲ್ಲಿ ಮಹೇಶ್ ಬಾಬು, ಇಲ್ಲಿ ದರ್ಶನ್ ಮತ್ತು ಶಿವಣ್ಣ
2003ರಲ್ಲಿ ನಟ ದರ್ಶನ್ ಗೆ ಅಭಿಮಾನಿಗಳು ಈ ಬಿರುದು ನೀಡಿದ್ದರು. ಆಗಾಗಲೇ ಮೆಜಿಸ್ಟಿಕ್, ಧ್ರುವ, ನಿನಗೋಸ್ಕರ, ಕಿಟ್ಟಿ, ಕರಿಯ ಅಂತಹ ಚಿತ್ರಗಳಲ್ಲಿ ನಟಿಸಿದ್ದರು.
ಎರಡು ದಶಕಗಳ ಕಾಲ ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಸ್ಟಾರ್ ಆಗಿ ಮಿಂಚುತ್ತಿರುವ ದರ್ಶನ್, ಸುಮಾರು 50ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಇದರಲ್ಲಿ ಹಲವು ಹಿಟ್ ಸಿನಿಮಾ ನೀಡಿದ್ದರೆ, ಕೆಲವು ಪ್ಲಾಫ್ ಚಿತ್ರಗಳು ಇವರ ಪಟ್ಟಿಯಲ್ಲಿದೆ.