Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಫಲಿತಾಂಶದ ದಿನವೇ ಡಿ-ಬಾಸ್ ಪಾಲಿಗೆ ಇನ್ನೊಂದು ವಿಶೇಷ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಭರ್ಜರಿ ಜಯ ಸಾಧಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ದರ್ಶನ್ ಅವರಿಗೆ ಹಾಗೂ ದರ್ಶನ್ ಅಭಿಮಾನಿಗಳಿಗೆ ಇದು ಸಂಭ್ರಮ ತಂದಿದೆ. ಯಾಕಂದ್ರೆ, ಸುಮಲತಾ ಅವರ ಗೆಲುವಿನಲ್ಲಿ ದರ್ಶನ್ ಮತ್ತು ಯಶ್ ಪಾತ್ರವೂ ಇದೆ. ಈ ಇಬ್ಬರು ನಟರು ಸುಮಲತಾ ಗೆಲುವಿಗಾಗಿ ಮಂಡ್ಯದಲ್ಲಿ ಪರೇಡ್ ಮಾಡಿದ್ದಾರೆ.
ಸುಮಲತಾ ಭರ್ಜರಿ ಗೆಲುವು : ದರ್ಶನ್ ಮನೆ ಮುಂದೆ ಅಭಿಮಾನಿಗಳ ಸಂಭ್ರಮ
ಸುಮಲತಾ ಜಯಗೊಳಿಸಿದ್ದಾರೆ ಎಂದು ಫಲಿತಾಂಶ ಹೊರಬೀಳುತ್ತಿದ್ದಂತೆ ಡಿ ಬಾಸ್ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಆದರೆ ದರ್ಶನ್ ಚಿತ್ರೀಕರಣ ನಿಮಿತ್ತ ಪಾಂಡಿಚೇರಿಗೆ ತೆರಳಿದ್ದಾರೆ ಎಂಬ ಮಾಹಿತಿ ಇದೆ.
ಅಂದ್ಹಾಗೆ, ಸುಮಲತಾ ಗೆಲುವಿನ ಜೊತೆಗೆ ದರ್ಶನ್ ಗೆ ಇನ್ನೊಂದು ವಿಶೇಷ ಏನಪ್ಪಾ ಅಂದ್ರೆ, ಡಿ ಬಾಸ್ ಗೆ 'ಚಾಲೆಂಜಿಂಗ್ ಸ್ಟಾರ್' ಎಂದು ಬಿರುದು ನೀಡಿ ಇಂದಿಗೆ 16 ವರ್ಷ ಆಗಿದೆಯಂತೆ. ಈ ಸಂಭ್ರಮವನ್ನ ಕೂಡ ದರ್ಶನ್ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
ಅಲ್ಲಿ ಮಹೇಶ್ ಬಾಬು, ಇಲ್ಲಿ ದರ್ಶನ್ ಮತ್ತು ಶಿವಣ್ಣ
2003ರಲ್ಲಿ ನಟ ದರ್ಶನ್ ಗೆ ಅಭಿಮಾನಿಗಳು ಈ ಬಿರುದು ನೀಡಿದ್ದರು. ಆಗಾಗಲೇ ಮೆಜಿಸ್ಟಿಕ್, ಧ್ರುವ, ನಿನಗೋಸ್ಕರ, ಕಿಟ್ಟಿ, ಕರಿಯ ಅಂತಹ ಚಿತ್ರಗಳಲ್ಲಿ ನಟಿಸಿದ್ದರು.
ಎರಡು ದಶಕಗಳ ಕಾಲ ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಸ್ಟಾರ್ ಆಗಿ ಮಿಂಚುತ್ತಿರುವ ದರ್ಶನ್, ಸುಮಾರು 50ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಇದರಲ್ಲಿ ಹಲವು ಹಿಟ್ ಸಿನಿಮಾ ನೀಡಿದ್ದರೆ, ಕೆಲವು ಪ್ಲಾಫ್ ಚಿತ್ರಗಳು ಇವರ ಪಟ್ಟಿಯಲ್ಲಿದೆ.