Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಾಯಿಯ ಮಡಿಲು' ಜಯಸುಧಾ ಆಸ್ಪತ್ರೆಗೆ ದಾಖಲು
ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಹಿರಿಯ ನಟಿ ಜಯಸುಧಾ(53) ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರು ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾಗಿ ಮೂಲಗಳು ತಿಳಿಸಿವೆ.
"ಗ್ಯಾಸ್ಟ್ರಿಕ್ ಸಮಸ್ಯೆಯಿರುವ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ಕಾಲ ಚಿಕಿತ್ಸೆ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿರುವುದಾಗಿ" ಜಯಸುಧಾ ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಜಯಸುಧಾ ಅವರು ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾದ ಮೇಲೆ ಅಷ್ಟಾಗಿ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ.
ಸದ್ಯಕ್ಕೆ ಜಯಸುಧಾ ಅವರು ತೆಲುಗಿನ 'ಶ್ರೀರಾಮರಾಜ್ಯಂ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವೈ ಎಸ್ ಜಗಮೋಹನ್ ರೆಡ್ಡಿ ಅವರನ್ನು ಬೆಂಬಲಿಸುತ್ತಿರುವ ಜಯಸುಧಾ ಅವರನ್ನು ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರು ರಾಜಕೀಯಕ್ಕೆ ಕರೆತಂದಿದ್ದರು.
ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆಲುಗು ಚಿತ್ರರಸಿಕರ ಮನಸೂರೆಗೊಂಡ ನಾಯಕಿ ಜಯಸುಧಾ. ತೆಲುಗಿನಲ್ಲಿ ಆಕೆ ಅಭಿನಯದ ಪ್ರೇಮಾಭಿಷೇಕಂ ಹಾಗೂ ಅಡವಿ ರಾಮುಡು ಚಿತ್ರಗಳು ಖ್ಯಾತಿಯ ಉತ್ತುಂಗಕ್ಕೇರುವಂತೆ ಮಾಡಿದವು. ಕನ್ನಡದ ತಾಯಿಯ ಮಡಿಲು ಚಿತ್ರದಲ್ಲಿ ಜಯಸುಧಾ ಅಭಿನಯಿಸಿದ್ದಾರೆ. (ಏಜೆನ್ಸೀಸ್)