Just In
Don't Miss!
- News
"ಸಿಬಿಐ, ಇಡಿ ಮೂಲಕ ಮೋದಿ ತಮಿಳುನಾಡನ್ನು ನಿಯಂತ್ರಿಸುವ ಪ್ರಯತ್ನದಲ್ಲಿದ್ದಾರೆ"
- Sports
'ವೈಟ್ಬಾಲ್ ತಂಡಗಳಲ್ಲಿ ಅಯ್ಯರ್, ಸ್ಯಾಮ್ಸನ್ ಬದಲು ಪಂತ್ ಆಡಿಸಬೇಕು'
- Automobiles
2021ರ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮನನೊಂದ ರಮ್ಯಾ ಚಿತ್ರರಂಗಕ್ಕೆ ಸ್ವಯಂ ನಿವೃತ್ತಿ ಘೋಷಣೆ
'ದಂಡಂ ದಶಗುಣಂ' ಚಿತ್ರದಕಿರಿಕಿರಿಯಿಂದ ಬೇಸತ್ತಿರುವ ನಟಿ ರಮ್ಯಾ ಚಿತ್ರರಂಗಕ್ಕೆ ಸ್ವಯಂ ನಿವೃತ್ತಿ ಘೋಷಿಸುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯ ಘಟನೆಗಳ ವಿರುದ್ಧ ಹೋರಾಟ ಮಾಡುವ ಶಕ್ತಿ ನನ್ನ ಬಳಿ ಇಲ್ಲ. ಇನ್ನು ಮುಂದೆ ಚಿತ್ರಗಳಲ್ಲಿ ನಟಿಸುವುದಿಲ್ಲ ಎಂದು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ನಲ್ಲಿ ಘಂಟಾಘೋಷಾಗಿ ಹೇಳಿದ್ದಾರೆ.
"ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆಯೊಬ್ಬಳಿಗೆ ಮಾಧ್ಯಮಗಳಿಂದ ಯಾವುದೇ ಬೆಂಬಲವಿಲ್ಲ...ಇನ್ನು ಮುಂದೆ ಯಾವುದೇ ಕಾರಣಕ್ಕೂ ಚಿತ್ರಗಳಲ್ಲಿ ನಟಿಸುವುದಿಲ್ಲ. ನನ್ನ ಬಳಿ ಹೋರಾಡುವ ಶಕ್ತಿಯೂ ಇಲ್ಲ. ನಾನು ಸ್ವಯಂ ನಿವೃತ್ತಿ ಘೋಷಿಸುತ್ತಿದ್ದೇನೆ. ಹೊಸ ಜೀವನನ್ನು ಶುರು ಮಾಡಲು ನಿರ್ಧರಿಸಿದ್ದೇನೆ" ಎಂದಿದ್ದಾರೆ.
'ದಂಡಂ ದಶಗುಣಂ' ಚಿತ್ರದ ನಿರ್ಮಾಪಕ ಗಣೇಶ್ ಬಗ್ಗೆಯೂ ರಮ್ಯಾ ಕೆಂಡಕಾರಿದ್ದಾರೆ. ಕಳೆದ ಆರು ತಿಂಗಳಿಂದ ನನ್ನ ದೂರವಾಣಿ ಕರೆಗಳಿಗೆ ಗಣೇಶ್ ಯಾಕೆ ಉತ್ತರ ನೀಡುತ್ತಿಲ್ಲ? ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಆಡಿಯೋ ಬಿಡುಗಡೆಗೆ ನಾನು ಬರದೆ ಇರುವುದು ಗಣೇಶ್ಗೆ ಲಾಭವೇ ಆಗಿದೆ. 'ದಂಡಂ ದಶಗುಣಂ' ಚಿತ್ರಕ್ಕೆ ಬಿಟ್ಟಿ ಪ್ರಚಾರ ಸಿಕ್ಕಿದೆ. ಒಂದು ವೇಳೆ ನಾನು ಆಡಿಯೋ ಬಿಡುಗಡೆಗೆ ಬಂದಿದ್ದರೆ ಹೀಗಾಗುತ್ತಿತ್ತೆ? ಎಂದು ಪ್ರಶ್ನಿಸಿದ್ದಾರೆ.