Don't Miss!
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೂರು ಜನ್ಮಕು' ಪತ್ರಿಕಾಗೋಷ್ಠಿಗೆ ಐಂದ್ರಿತಾ ಇಲ್ಲ
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ನೂರು ಜನ್ಮಕು' ಚಿತ್ರದ ಪತ್ರಿಕಾಗೋಷ್ಠಿಯನ್ನು ಗುರುವಾರ (ಡಿ.17) ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣದ ಬಳಿ ಇರುವ ಬೆಲ್ ಹೋಟೆಲ್ ನಲ್ಲಿ ಮಧ್ಯಾಹ್ನ 12 ಗಂಟೆಗೆ ಆಯೋಜಿಸಲಾಗಿದೆ. ಆದರೆ ಈ ಪತ್ರಿಕಾಗೋಷ್ಠಿಗೆ ಚಿತ್ರದ ನಾಯಕಿ ಐಂದ್ರಿತಾ ರೇ ಬರುತ್ತಿಲ್ಲ.
'ನೂರು ಜನ್ಮಕು' ಚಿತ್ರಕ್ಕೆ ಸಂಬಂಧಿಸಿದ ಪತ್ರಿಕಾಗೋಷ್ಠಿ ಇದಾಗಿದ್ದು 'ಕಪಾಳಮೋಕ್ಷ' ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಮಧ್ಯಪ್ರವೇಶಿಸಿ ಐಂದ್ರಿತಾ ಮತ್ತು ನಾಗತಿಹಳ್ಳಿ 'ಕಪಾಳಮೋಕ್ಷ' ಪ್ರಕರಣಕ್ಕೆ ಸುಖಾಂತ್ಯ ಹಾಡಿದ್ದು ಗೊತ್ತೆ ಇದೆ.
ಇದೀಗ ಸಮಸ್ಯೆಯಲ್ಲಾ ಬಗೆಹರಿದಿದ್ದು ಮತ್ತೆ ಅದನ್ನು ಕೆದಕುವ ಉದ್ದೇಶ ಇಲ್ಲ. ಇನ್ನೇನಿದ್ದರೂ ಚಿತ್ರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎನ್ನುತ್ತವೆ 'ನೂರು ಜನ್ಮಕು' ಚಿತ್ರತಂಡ ಮೂಲಗಳು. ಕೇವಲ ಐಂದ್ರಿತಾ ರೇ ಅಷ್ಟೇ ಅಲ್ಲ ನಾಯಕ ಸಂತೋಷ್ ಹಾಗೂ ನಿರ್ಮಾಪಕ ವಿನಯ್ ಲಾಡ್ ಸಹ ಪತ್ರಿಕಾಗೋಷ್ಠಿಗೆ ಹಾಜರಾಗುತ್ತಿಲ್ಲ. ನಾಗತಿಹಳ್ಳಿ ಅವರೊಂದಿಗೆ ಇತರೆ ಕಲಾವಿದರು, ತಂತ್ರಜ್ಞರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)