Don't Miss!
- News ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ, ಆದ್ರೆ ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ-ಪ್ರಿಯಾಂಕ್ ಖರ್ಗೆ
- Lifestyle ಬಿಸಿಲಿನಲ್ಲಿ ಬಸವಳಿದಿದ್ದ ಆನೆಗೆ ನೀರು ನೀಡಿ ಹೀರೋ ಆದ ಯುವಕ..!
- Automobiles ಸಾಮಾನ್ಯನ ಸ್ಟೋರಿ: ಬಹುಕಾಲದ ಕನಸನ್ನು ನನಸು ಮಾಡಿಕೊಂಡ ವಿಘ್ನೇಶ..! ನೆಚ್ಚಿನ ವ್ಯಾಗನ್ಆರ್ ಕಾರು ಖರೀದಿ
- Technology ನೀವು ಜಿಯೋ ಗ್ರಾಹಕರೇ?..ಹಾಗಿದ್ರೆ, ಈ ಪ್ಲ್ಯಾನಿಗೆ ಖಂಡಿತಾ ಫಿದಾ ಆಗ್ತೀರಾ!
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನಸಿನ ಮಾತಿನಲ್ಲಿ ಮುಳುಗಿದ ಅಂದ್ರಿತಾ ರೇ
ಬೊಂಬೆ ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಜಯ್ ಪ್ರೇಯಸಿ ಅಂದ್ರಿತಾ ರೇ ಮೇಲೆ ಜೀವವನ್ನೇ ಇಟ್ಟಿರುತ್ತಾರೆ. ಬೊಂಬೆ ಕೊಳ್ಳುವ ನೆಪದಲ್ಲಿ ಅಜಯ್ ಬಳಿ ಬಂದ ಖಳನಟ ಹರೀಶ್ರಾಯ್ ಬೊಂಬೆ ಮಾರುವ ಹಾಗೆ ನಿನ್ನ ಪ್ರೇಯಸಿಯನ್ನು ಮಾರಿಬಿಡು. ಎಷ್ಟು ಬೇಕಾದರೂ ಕೊಟ್ಟು ಖರೀದಿಸುತ್ತೇನೆ ಎನ್ನುತ್ತಾರೆ. ಈ ಮಾತನ್ನು ಕೇಳಿದ ಯಾವ ಪ್ರೇಮಿ ತಾನೆ ಸುಮ್ಮನಿರುತ್ತಾನೆ ಹೇಳಿ? ನಾಯಕ ಅಜಯ್ ಕೂಡ ಖಳನಟನ ಮಾತಿನಿಂದ ಕುಪಿತನಾಗಿ ಅವನೊಂದಿಗೆ ಹೊಡೆದಾಟಕ್ಕೆ ಮುಂದಾಗುತ್ತಾನೆ. ಆ ಸಮಯಕ್ಕೆ ಅಲ್ಲಿಗೆ ಆಗಮಿಸಿದ ಅಂದ್ರಿತಾ ರೇ ಇಬ್ಬರ ನಡುವಿನ ಮಾರಾಮಾರಿಗೆ ಮಂಗಳ ಹಾಡುವ ಸನ್ನಿವೇಶವನ್ನು 'ಮನಸಿನ ಮಾತು' ಚಿತ್ರಕ್ಕಾಗಿ ನಗರದ ಗೋಪಾಲನ್ ಮಾಲ್ನಲ್ಲಿ ಸಾಹಸ ಸಂಯೋಜಕ ಪಳನಿರಾಜ್ ಅವರ ಸಾರಥ್ಯದಲ್ಲಿ ನಿರ್ದೇಶಕ ಅನಂತರಾಜು ಚಿತ್ರೀಕರಿಸಿಕೊಂಡರು.
ಮಾನಸ ಚಿತ್ರ ಲಾಂಛನದಲ್ಲಿ ಡಿ.ಕೆ.ರಾಮಕೃಷ್ಣ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಕಳೆದಸಾಲಿನ ಯಶಸ್ವಿ ಚಿತ್ರಗಳಲೊಂದಾದ 'ಮಸ್ತ್ ಮಜಾ ಮಾಡಿ' ಚಿತ್ರವನ್ನು ನಿರ್ದೇಶಿಸಿದ್ದ ಅನಂತರಾಜು ಚಿತ್ರಕತೆ ಬರೆದು ನಿರ್ದೇಶಿಸುತ್ತಿದ್ದಾರೆ. ಸಿ.ರಾಜಶೇಖರ್ ಸಹನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಸಾಧು ಕೋಕಿಲಾ ಸಂಗೀತ ಸಂಯೋಜಿಸುತ್ತಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ರಾಂ ನಾರಾಯಣ್ ಸಂಭಾಷಣೆ, ಅನಿಲ್.ಬಿ.ಕೃಷ್ಣ ನಿರ್ಮಾಣನಿರ್ವಹಣೆಯಿರುವ ಚಿತ್ರಕ್ಕೆ ಅಜಯ್, ಅಂದ್ರಿತಾ ರೇ, ಅವಿನಾಶ್, ಸಾಧು ಕೋಕಿಲಾ, ತಾರಾ, ಲೋಹಿತ್ ಮುಂತಾದವರ ತಾರಾಬಳಗವಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಚಿಗರೆ
ಕಂಗಳ
ಚೆಲುವೆ
ಅಂದ್ರಿತಾ
ರೇ
2008ರಲ್ಲಿ
ಮಿಂಚಿದ
ಕನ್ನಡದ
ಪಂಚ
ನಟಿಯರು