Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಾರ್ಥನೆ ನೋಡಲಿದ್ದಾರೆ ಸಿಎಂ ಯಡಿಯೂರಪ್ಪ
ಬೆಂಗಳೂರು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ರಕರ್ತ ಸದಾಶಿವ ಶೆಣೈ ಇದೇ ಮೊದಲ ಬಾರಿಗೆ ಆಕ್ಷನ್, ಕಟ್ ಹೇಳಿರುವ ಚಿತ್ರ 'ಪ್ರಾರ್ಥನೆ'. ಈ ಚಿತ್ರವನ್ನು "ವಿಶ್ವ ಮಾತೃಭಾಷೆ ದಿನ" ಮಾರ್ಚ್ 12ರಂದು ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವೀಕ್ಷಿಸಲಿದ್ದಾರೆ.
ಶೆಣೈ ಅವರ 'ಪ್ರಾರ್ಥನೆ' ಚಿತ್ರ ಹಲವು ವಿಶೇಷಗಳಿಂದ ಕೂಡಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಚಿತ್ರದಲ್ಲಿ ಅಭಿನಯಿಸಿದ್ದು ಈಗಾಗಲೆ ಸಾಕಷ್ಟು ಸುದ್ದಿಯಾಗಿದೆ. ಹಾಗೆಯೇ ನಟ ಪ್ರಕಾಶ್ ರೈ ಕೂಡ ಚಿತ್ರದ ಪ್ರಮುಖ ಪಾತ್ರವನ್ನು ಪೋಷಿಸಿದ್ದಾರೆ. ಸಾಮಾಜಿಕ ಸಮಸ್ಯೆಯೊಂದರ ಕಥಾಹಂದರವನ್ನು 'ಪ್ರಾರ್ಥನೆ' ಒಳಗೊಂಡಿದೆ.
ಇಷ್ಟಕ್ಕೂ ಈ ಚಿತ್ರದ ವಿಶೇಷತೆ ಏನೆಂದರೆ, ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕೌಟುಂಬಿಕ ಹಿನ್ನೆಲೆಯಲ್ಲಿ 'ಪ್ರಾರ್ಥನೆ' ಕತೆ ಸಾಗುತ್ತದೆ.ಅನಂತನಾಗ್ ಮತ್ತು ಪವಿತ್ರಾ ಲೋಕೇಶ್ ಚಿತ್ರದ ಮುಖ್ಯ ಪಾತ್ರಧಾರಿಗಳು. ತಮ್ಮ ಮಗುವನ್ನು ಇಂಗ್ಲಿಷ್ ಅಥವಾ ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕೆ?ಯಾವ ಮಾಧ್ಯಮಕ್ಕೆ ಸೇರಿಸಿದರೆ ಉತ್ತಮ? ಎಂಬ ಪ್ರಚಲಿತ ಸಮಸ್ಯೆಗಳಿಗೆ ಚಿತ್ರದಲ್ಲಿ ಉತ್ತರ ಹುಡುಕುವ ಪ್ರಯತ್ನ ಮಾಡಲಾಗಿದೆ .
ಚಿತ್ರದ ಪಾತ್ರವರ್ಗದಲ್ಲಿ ಪ್ರಕಾಶ್ ರೈ, ಅನಂತನಾಗ್, ಪವಿತ್ರಾ ಲೋಕೇಶ್, ಬಿ ಸಿ ಪಾಟೀಲ್,ಅಶೋಕ್, ಮಾಸ್ಟರ್ ಸಚಿನ್ ಮುಂತಾದವರು ಇದ್ದಾರೆ. ಖ್ಯಾತ ಛಾಯಾಗ್ರಾಹಕ ಎಸ್ ರಾಮಚಂದ್ರ ಕ್ಯಾಮೆರಾ ಹಿಡಿದ ಕೊನೆಯ ಚಿತ್ರವಿದು, ಚಿತ್ರದಲ್ಲಿನ ಒಂದು ಪ್ರಾರ್ಥನೆ ಗೀತೆಯಿದ್ದು ಅದಕ್ಕೆ ಸಂಗೀತ ಸಂಯೋಜಿಸಿ ವೀರ್ ಸಮರ್ಥ್.