Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಸಿಎಲ್ ನಲ್ಲಿ ಪುನೀತ್, ಶಿವಣ್ಣ, ಉಪೇಂದ್ರ ಯಾಕಿಲ್ಲ?
ಬೆಂಗಳೂರು ಬುಲ್ಡೋಜರ್ಸ್ ತಂಡ ಬೆಂಗಾಳಿಗರ ವಿರುದ್ಧ ಸಿಸಿಎಲ್ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಆದರೆ ಬೆಂಗಳೂರು ತಂಡದಲ್ಲಿ ಹಿರಿಯ ನಟರಾದ ಶಿವಣ್ಣ, ಉಪೇಂದ್ರ ಮತ್ತು ಪುನೀತ್ ಇಲ್ಲದಿರುವುದು ಸಿನಿಪ್ರೇಕ್ಷಕರಿಗೆ ಅದರಲ್ಲೂ ವಿಶೇಷವಾಗಿ ಶಿವಣ್ಣ ಹಾಗೂ ಪುನೀತ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ರಾಜ್ ಕುಮಾರ್ ಕುಟುಂಬವನ್ನು ಉದ್ದೇಶಪೂರ್ವಕವಾಗಿಯೇ ಸಿಸಿಎಲ್ ನಿಂದ ಹೊರಗಿಡಲಾಗಿದೆ ಎಂಬ ದೂರು ಕೇಳಿಬರುತ್ತಿದೆ. ಕಾರಣ ಕಳೆದ ಬಾರಿ ನಡೆದ ಕೋಲಾಹಲ. ಆದರೆ ರಾಘವೇಂದ್ರ ರಾಜ್ ಕುಮಾರ್, ಆಟ ನಡೆಯುತ್ತಿರುವಾಗ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಉಪಸ್ಥಿತರಿದ್ದರು. ರಾಜ್ ಕುಟುಂಬ ಕ್ರಿಕೆಟ್ ನಿಂದ ಹೊರಗಿರುವುದು ಸುಳ್ಳು ಎಂಬುದು ಈ ಮೂಲಕ ಜಗಜ್ಜಾಹೀರಾಗಿದೆ. ಇನ್ನು ಉಪೇಂದ್ರ ಶೂಟಿಂಗ್ ನಲ್ಲಿ ಬ್ಯುಸಿ ಅಷ್ಟೇ.
ಇಡೀ ತಂಡದ ಆಯ್ಕೆ ಸರಿಯಾಗಿಲ್ಲ ಎಂಬ ನಿರ್ಮಾಪಕರ ಸಂಘದ ಸೆಕ್ರೆಟರಿ ಗಣೇಶ್ ಅವರ ಮಾತಿಗೂ ಯಾವುದೇ ಪುಷ್ಟಿ ದೊರೆತಿಲ್ಲ. ಕಾರಣ, ಸ್ವತಃ ಶಿವರಾಜ್ ಕುಮಾರ್ ಹಾಗೂ ಪುನೀತ್, "ನಾವಿಬ್ಬರೂ ಬಿಡುವಿಲ್ಲದ ಶೂಟಿಂಗ್ ನಲ್ಲಿ ನಿರತರಾಗಿದ್ದೇವೆ. ಹಾಗಾಗಿ ಸಿಸಿಎಲ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಯಾವುದೇ ಸಂಶಯಕ್ಕೆ, ರಾಜಕೀಯಕ್ಕೆ ಅವಕಾಶವಿಲ್ಲ. (ಒನ್ ಇಂಡಿಯಾ ಕನ್ನಡ)