Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಂದಿಬೆಟ್ಟದಲ್ಲಿ ಧೂದ್ ಪೇಡ ದಿಗಂತ್ ಪುತ್ರ ಗೀತೆ
ಧೂದ್ ಪೇಡ ದಿಗಂತ್ ಮತ್ತು ರೂಪಶ್ರೀ ಮುಖ್ಯಭೂಮಿಕೆಯಲ್ಲಿರುವ ಚಿತ್ರ ಪುತ್ರ. ಇತ್ತೀಚೆಗೆ ಈ ಚಿತ್ರದ ಹಾಡೊಂದನ್ನು ನಂದಿಬೆಟ್ಟದಲ್ಲಿ ಚಿತ್ರೀಕರಿಸಲಾಯಿತು. ರಾಂನಾರಾಯಣ್ ರಚನೆಯ 'ಕಾಲೇಜು ಜನರೇಶನ್ ಯಾರ ಮಾತು ಕೇಳಲ್ಲಾ ಹಾರ್ಟ್ನಲ್ಲಿ ವೈಬ್ರೇಶನ್ ಎಂದಿಗೂ ಮುಗಿಯಲ್ಲಾ ಎಂಬ ಹಾಡಿಗೆ ರಾಜಾ ನೃತ್ಯ ನಿರ್ದೇಶನದಲ್ಲಿ ದಿಗಂತ್ ಹಾಗೂ ರೂಪಶ್ರೀ ಹೆಜ್ಜೆ ಹಾಕಿದರು.
ಈ ಗೀತೆಯ ಚಿತ್ರೀಕರಣದೊಂದಿಗೆ 'ಪುತ್ರ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ ಎಂದು ನಿರ್ದೇಶಕ ಉಮಾಕಾಂತ್ ತಿಳಿಸಿದ್ದಾರೆ. ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಂಥೋಣಿಪಾಲ್ ಆವರು ನಿರ್ಮಿಸುತ್ತಿರುವ ಚಿತ್ರ ಇದಾಗಿದೆ. ಟಿ.ಸತ್ಯನಾರಾಯಣರ ಸಹ ನಿರ್ಮಾಣವಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು, ಮೇಲುಕೋಟೆ, ನಂದಿಬೆಟ್ಟ ಹಾಗೂ ಚಿಕ್ಕಮಗಳೂರಿನಲ್ಲಿ ಒಟ್ಟು ನಲವತ್ತೈದು ದಿನಗಳ ಕಾಲ ನಡೆದಿದೆ. ಸದ್ಯದಲ್ಲೆ ಮಾತಿನ ಜೋಡಣೆ ಆರಂಭವಾಗಲಿದೆ.
ಆರು ಹಾಡುಗಳಿರುವ ಈ ಚಿತ್ರಕ್ಕೆ ರಮೇಶ್ರಾಜಾ ಸಂಗೀತ ನೀಡಿದ್ದಾರೆ. ರವಿಸುವರ್ಣ ಛಾಯಾಗ್ರಹಣ, ಬಾಬುಖಾನ್ ಕಲಾನಿರ್ದೇಶನ, ಚಂದ್ರಮಯೂರ್ ಹಾಗೂ ರಾಜಾ ನೃತ್ಯ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ಹಾಗೂ ರಾಮಣ್ಣನವರ ನಿರ್ಮಾಣ ನಿರ್ವಹಣೆಯಿದೆ. ದಿಗಂತ್, ಸುಪ್ರೀತಾ, ರೂಪಶ್ರೀ, ಅವಿನಾಶ್, ಟೆನ್ನಿಸ್ಕೃಷ್ಣ, ಸುಧಾಬೆಳವಾಡಿ, ಸುಂದರರಾಜ್ ತಾರಾಬಳಗ ಚಿತ್ರಕ್ಕಿದೆ.