Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ನೋಡುವುದು ಗೊತ್ತು ಓದುವುದು ಹೇಗೆ?
ಕ್ರೆಡಿಟ್ ಕಾರ್ಡ್ ಅಥವಾ ನಗದಿನ ಮೂಲಕ ಸಿನಿಮಾ ಟಿಕೆಟ್ ಖರೀದಿಸುತ್ತೇವೆ. ಸಿನೆಮಾ ನೋಡಿ ಹೊರಬರುತ್ತೇವೆ. ನೋಡಿದ ಸಿನೆಮಾ ಬಗ್ಗೆ ಎರಡು ಮಾತನಾಡಿ ಒಂದು ಕಡೆ ಸರಾಸರಿ ಪ್ರೇಕ್ಷಕನಾಗಿ ಉಳಿದು, ನಾವು ಆಡಿದ ಮಾತುಗಳೆಲ್ಲ ಆಳವಾದ ವಿಮರ್ಶೆ ಎಂದೇ ಭಾವಿಸಿ ಬಿಡುತ್ತೇವೆ. ಇದು ಅಹಂಕಾರ ಎಂದು ಕೂಡ ನಮ್ಮ ಅರಿವಿಗಿರುವುದಿಲ್ಲ.
ಇದು ನಮ್ಮಲ್ಲಿ ಅನೇಕರ, ಬಹುಸಂಖ್ಯಾತರ ಸತ್ಯ. ಹೆಚ್ಚಿನ ಮಟ್ಟಿಗೆ ಯುವ ಪ್ರೇಕ್ಷಕನನ್ನು ವ್ಯಾಖ್ಯಾನಿಸಲು ಬಳಸಬಹುದಾದ ಸಾರ್ವತ್ರಿಕಗೊಂಡಿರುವ ಸತ್ಯ. ಸಿನೆಮಾ ನೋಡಲು ಬೇಕಾಗಿರುವ ನಮ್ರತೆ, ವಿನಯ, ಸಿನೆಮಾ ನಿಶ್ಯಬ್ದವಾಗಿ, ಉಳಿದು ಹೇಳುತ್ತಾ, ಹೋಗುವುದನ್ನು ಗ್ರಹಿಸಲು ಬೇಕಾಗಿರುವ ಶಿಸ್ತು ಇಲ್ಲವಾಗಿವೆ ಎಂಬ ಕೊರತೆ ನಮ್ಮಲ್ಲಿ ಬಹಳಷ್ಟು ಜನರನ್ನ ಕಾಡುತ್ತಿದೆ. ಆ ಕೊರತೆ ನೀಗಿಸುವ ನಿಟ್ಟಿನಲ್ಲಿ ಸಂವಾದ ಡಾಟ್ ಕಾಂ ಒಂದು ಶಿಬಿರದ ಆಯೋಜನೆ ಮಾಡುತ್ತಿದೆ.
ಸಿನಿಮಾ ಕುರಿತಾದ ಪಠ್ಯ ಮತ್ತು ಚಟುವಟಿಕೆಗಳಿಂದಾಗಿ ಕನ್ನಡ ಅಂತರ್ಜಾಲ ಪ್ರಪಂಚದಲ್ಲಿ ಗಮನ ಸೆಳೆಯುವಂತೆ ಕಾರ್ಯ ನಿರ್ವಹಿಸುತ್ತಿರುವ ಸಂವಾದ ಡಾಟ್ ಕಾಂ ಮೂರು ದಿನಗಳ ರಸಗ್ರಹಣ ಶಿಬಿರನ್ನು ಆಯೋಜಿಸಿದೆ. 'ಟೂರಿಂಗ್ ಟಾಕೀಸ್ : ಸಿನಿಮಾ ಓದುವುದು ಹೇಗೆ?' ಎಂಬ ಶೀರ್ಷಿಕೆಯ ಚಲನಚಿತ್ರ ರಸಗ್ರಹಣ ಶಿಬಿರ ಆಗಸ್ಟ್ 27, 28 ಮತ್ತು 29ರಂದು ತುಮಕೂರು ಬಳಿಯ ಓದೇಕರ್ ಫಾರಂನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಯಾರ್ಯಾರು ಭಾಗವಹಿಸಲಿದ್ದಾರೆ: ಪಿ. ಶೇಷಾದ್ರಿ , ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರು; ಗುರು ಪ್ರಸಾದ್, ಮಠ ಖ್ಯಾತಿಯ ನಿರ್ದೇಶಕರು; ಶಶಾಂಕ್, ಮೊಗ್ಗಿನ ಮನಸು ಖ್ಯಾತಿಯ ನಿರ್ದೇಶಕರು; ಪುಟ್ಟಸ್ವಾಮಿ ಕೆ ಎಸ್, 'ಸಿನಿಮಾ ಯಾನ' ಕೃತಿ ಕರ್ತೃ, ವಿಮರ್ಶಕರು; ಡೇವಿಡ್ ಬಾಂಡ್, ಫ್ರೆಂಚ್ ಸಿನೆಮಾ ವಿಮರ್ಶಕರು; ಡಾ.ಸಿ ಸೋಮಶೇಖರ್, ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ. ಶೇಖರ್ ಪೂರ್ಣ, ಕನ್ನಡ ಸಾಹಿತ್ಯ ಡಾಟ್ ಕಾಂನ ಸಂಪಾದಕರು. ಹೆಚ್ಚಿನ ಮಾಹಿತಿಗೆ ಅರೇಹಳ್ಳಿ ರವಿ : 99004 39930, ಕಿರಣ್ ಎಂ: 97317 55966 ಸಂಪರ್ಕಿಸಬಹುದು.