Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತಿ ಶೀಘ್ರದಲ್ಲೇ ತಾರೆ ಪೂಜಾಗಾಂಧಿ ಕಲ್ಯಾಣಮಸ್ತು
ಮುಂಗಾರು ಮಳೆ' ಹುಡುಗಿ ಪೂಜಾಗಾಂಧಿ ಕನ್ನಡದ ಹುಡುಗನ ಕೈಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುದ್ದಿ ಇತ್ತು. ಅವರ ಮದುವೆ ಯಾವಾಗ ಎಂದು ಕೇಳಿದಿರಾ?ಆದರೆ ಇದು ಪೂಜಾಗಾಂಧಿ ಮದುವೆ ಸುದ್ದಿ ಅಲ್ಲ ಬಿಡಿ. ಹಾಗಂತ ನಿರಾಶರಾಗಬೇಡಿ. ಇದು ಪೂಜಾಗಾಂಧಿ 'ಕಲ್ಯಾಣಮಸ್ತು' ಚಿತ್ರಕ್ಕೆ ಸಂಬಂಧಿಸಿದ ಸುದ್ದಿ.
ಸುದೀರ್ಘ ಸಮಯದಿಂದ ರೀಲು ಸುತ್ತುತ್ತಲೇ ಇದ್ದ ಚಿತ್ರ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಬೆಂಗಳೂರಿನ ಪ್ರಸಾದ್ ಸ್ಟುಡಿಯೋದಲ್ಲಿ ಮಾತಿನ ಧ್ವನಿಮುದ್ರಣ ನಡೆಯಿತು. ಶೀಘ್ರದಲ್ಲೇ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ ಎಂದು ನಿರ್ದೇಶಕ ಬಿ.ಮಲ್ಲೇಶ್ ತಿಳಿಸಿದ್ದಾರೆ. ಈ ಚಿತ್ರದ ನಾಯಕ ನಟ 'ಪಟ್ರೆ' ಖ್ಯಾತಿಯ ಅಜಿತ್.
ಚಿತ್ರದ ಹೆಸರೇ ಹೇಳುವಂತೆ ಇದೊಂದು ಪಕ್ಕಾ ಫ್ಯಾಮಿಲಿ ಚಿತ್ರ. ಕಾಲೇಜು ಕ್ಯಾಂಪಸ್ಸು, ಪ್ರೀತಿ ಪ್ರೇಮ ಪ್ರಣಯ ಎಲ್ಲವೂ ಇದೆ. ಅಷ್ಟೇ ಅಲ್ಲದೆ ತಾಯಿ, ತಂಗಿ ಫ್ಯಾಮಿಲಿ ಸೆಂಟಿಮೆಂಟ್ ಕೂಡ ಇದೆಯಂತೆ. ಚೆನ್ನೈ ಮೂಲದ ಭರತ್ ಸಂಗೀತ ಚಿತ್ರಕ್ಕಿದೆ. ರವಿ ಪ್ರಕಾಶ್, ಅನಂತನಾಗ್, ಸಿತಾರ, ಅವಿನಾಶ್, ಮಾಳವಿಕಾ, ಉಮಾಶ್ರೀ ಸೇರಿದಂತೆ ಹಲವು ತಾರಾಬಳಗ ಚಿತ್ರಕ್ಕಿದೆ. (ಒನ್ಇಂಡಿಯಾ ಕನ್ನಡ)