Don't Miss!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತಿ ಶೀಘ್ರದಲ್ಲೇ ತಾರೆ ಪೂಜಾಗಾಂಧಿ ಕಲ್ಯಾಣಮಸ್ತು
ಮುಂಗಾರು ಮಳೆ' ಹುಡುಗಿ ಪೂಜಾಗಾಂಧಿ ಕನ್ನಡದ ಹುಡುಗನ ಕೈಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುದ್ದಿ ಇತ್ತು. ಅವರ ಮದುವೆ ಯಾವಾಗ ಎಂದು ಕೇಳಿದಿರಾ?ಆದರೆ ಇದು ಪೂಜಾಗಾಂಧಿ ಮದುವೆ ಸುದ್ದಿ ಅಲ್ಲ ಬಿಡಿ. ಹಾಗಂತ ನಿರಾಶರಾಗಬೇಡಿ. ಇದು ಪೂಜಾಗಾಂಧಿ 'ಕಲ್ಯಾಣಮಸ್ತು' ಚಿತ್ರಕ್ಕೆ ಸಂಬಂಧಿಸಿದ ಸುದ್ದಿ.
ಸುದೀರ್ಘ ಸಮಯದಿಂದ ರೀಲು ಸುತ್ತುತ್ತಲೇ ಇದ್ದ ಚಿತ್ರ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಬೆಂಗಳೂರಿನ ಪ್ರಸಾದ್ ಸ್ಟುಡಿಯೋದಲ್ಲಿ ಮಾತಿನ ಧ್ವನಿಮುದ್ರಣ ನಡೆಯಿತು. ಶೀಘ್ರದಲ್ಲೇ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ ಎಂದು ನಿರ್ದೇಶಕ ಬಿ.ಮಲ್ಲೇಶ್ ತಿಳಿಸಿದ್ದಾರೆ. ಈ ಚಿತ್ರದ ನಾಯಕ ನಟ 'ಪಟ್ರೆ' ಖ್ಯಾತಿಯ ಅಜಿತ್.
ಚಿತ್ರದ ಹೆಸರೇ ಹೇಳುವಂತೆ ಇದೊಂದು ಪಕ್ಕಾ ಫ್ಯಾಮಿಲಿ ಚಿತ್ರ. ಕಾಲೇಜು ಕ್ಯಾಂಪಸ್ಸು, ಪ್ರೀತಿ ಪ್ರೇಮ ಪ್ರಣಯ ಎಲ್ಲವೂ ಇದೆ. ಅಷ್ಟೇ ಅಲ್ಲದೆ ತಾಯಿ, ತಂಗಿ ಫ್ಯಾಮಿಲಿ ಸೆಂಟಿಮೆಂಟ್ ಕೂಡ ಇದೆಯಂತೆ. ಚೆನ್ನೈ ಮೂಲದ ಭರತ್ ಸಂಗೀತ ಚಿತ್ರಕ್ಕಿದೆ. ರವಿ ಪ್ರಕಾಶ್, ಅನಂತನಾಗ್, ಸಿತಾರ, ಅವಿನಾಶ್, ಮಾಳವಿಕಾ, ಉಮಾಶ್ರೀ ಸೇರಿದಂತೆ ಹಲವು ತಾರಾಬಳಗ ಚಿತ್ರಕ್ಕಿದೆ. (ಒನ್ಇಂಡಿಯಾ ಕನ್ನಡ)