Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿಗೆ ವಾಪಸ್ಸಾದ 'ಶ್ರೀಹರಿ'
ಸಿ.ಕೆ. ಫಿಲಂಸ್ ಹಾಗೂ ಡಿ ಪಿಕ್ಚರ್ಸ್ ಲಾಂಛನದಲ್ಲಿ ಎಸ್.ಎ. ಚಿನ್ನೇಗೌಡ, ಎಂ. ಎನ್. ಕುಮಾರ್ ಹಾಗೂ ದಯಾಳ್ ಪದ್ಮನಾಭನ್ ಸೇರಿ ನಿರ್ಮಿಸುತ್ತಿರುವ ಶ್ರೀಹರಿ ಚಿತ್ರದಲ್ಲಿ ಪೂಜಾ ಗಾಂಧಿ ಹಾಗೂ ರಾಧಿಕಾ ಗಾಂಧಿ ಒಟ್ಟಿಗೇ ಅಭಿನಯಿಸುತ್ತಿದ್ದು, ಬೆಂಗಳೂರಿನಲ್ಲಿ 3 ಹಾಡುಗಳನ್ನು ಮುಗಿಸಿ,ಕೊಂಡಿದೆ.
ಇಪ್ಪತ್ತು ದಿನಗಳ ಕಾಲ ಮಂಗಳೂರು ಸುತ್ತಮುತ್ತ ಮಲ್ಪೆ ಬೀಚ್ ಹಾಗೂ ಬೀಚ್ ಪಕ್ಕದ ದೊಡ್ಡ ಬಂಗಲೆಯೊಂದರಲ್ಲಿ ಹಾಗೂ ಸಕಲೇಶಪುರದ ಸುತ್ತಮುತ್ತ ರಮ್ಯ ಹೊರಾಂಗಣದಲ್ಲಿ ಉಳಿದ 2 ಹಾಡುಗಳು ಹಾಗೂ ಮಾತಿನ ಭಾಗದ ಚಿತ್ರೀಕರಣ ಮುಗಿಸಿಕೊಂಡು ಚಿತ್ರತಂಡ ಇದೀಗ ಬೆಂಗಳೂರಿಗೆ ವಾಪಸಾಗಿದೆ.
ಎಂ.ಎಲ್. ಪ್ರಸನ್ನ ಅವರ ಸಂಭಾಷಣೆ, ಬಿ. ರಾಕೇಶ್ರ ಛಾಯಾಗ್ರಹಣ, ಸಮೀರ್ ಕುಲಕರ್ಣಿರವರ ಸಂಗೀತ ಸಂಯೋಜನೆ, ರೇವಣ್ಣ ಅವರ ಕಲಾನಿರ್ದೇಶನ, ಹರ್ಷ-ಮುರಳಿ ಅವರ ನೃತ್ಯ ಸಂಯೋಜನೆ, ನಾಗತಿಹಳ್ಳಿ ಚಂದ್ರಶೇಖರ್, ಯೋಗರಾಜ್ ಭಟ್, ನಾಗೇಂದ್ರಪ್ರಸಾದ್, ಶಶಾಂಕ್ರ ಸಾಹಿತ್ಯ ರಚನೆ ಈ ಚಿತ್ರಕ್ಕಿದ್ದು, ಕಥೆ-ಚಿತ್ರಕಥೆ-ನಿರ್ದೇಶನ ದಯಾಳ್ ಪದ್ಮನಾಭನ್ ಅವರದಾಗಿದೆ.
ಶ್ರೀಮುರಳಿ, ರಾಧಿಕಾ ಗಾಂಧಿ, ಪೂಜಾ ಗಾಂಧಿ, ಸಿಹಿಕಹಿ ಚಂದ್ರು, ಸಿಹಿಕಹಿ ಗೀತಾ, ಅಚ್ಯುತ್, ಪದ್ಮಜಾ ರಾವ್, ನವೀನ್ ಕೃಷ್ಣ, ಶರಣ್, ನಾಗಶೇಖರ್, ಸಂಗೀತಾ, ಶೋಭಾ ನಾಯ್ಡು, ಶ್ರೀನಿವಾಸಮೂರ್ತಿ, ಪ್ರಮುಖ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)