Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈ ನೇಮ್ ಈಸ್ 'ಕರಿಚಿರತೆ' ಎಂದ ವಿಜಯ್
ಕೃಷ್ಣಯ್ಯ ಹಾಗೂ ಮೋಹನ್ ನಿರ್ಮಾಣದ 'ಕರಿಚಿರತೆ' ಚಿತ್ರಕ್ಕೆ ಕಳೆದ ವಾರ ಮಿನರ್ವ ಮಿಲ್ನಲ್ಲಿ ಹಾಡೊಂದರ ಚಿತ್ರೀಕರಣ ನಡೆಯಿತು. ಗಜ, ರಾಮ್ ಚಿತ್ರಗಳ ನಿರ್ದೇಶಕ ಮಾದೇಶ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿಜಯ್ ಕರಿಚಿರತೆಯಾಗಿ ಅಭಿನಯಿಸುತ್ತಿದ್ದಾರೆ.
ಈಗಾಗಲೇ ಮೈಸೂರು ಸುತ್ತಮುತ್ತ 25 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ಮಾಡಲಾಗಿದೆ. ಮೊನ್ನೆ ಮಿಲ್ನ ಆವರಣದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ಹಾಕಲಾಗಿದ್ದ ಅದ್ಧೂರಿ ಸೆಟ್ನಲ್ಲಿ 'ಮೈ ನೇಮ್ ಈಸ್ ಕರಿ ಚಿರತೆ...' ಎಂಬ ಹಾಡಿಗೆ ವಿಜಯ್, ಯಜ್ಞ ಶೆಟ್ಟಿ ಜೊತೆ 25 ಜನ ನೃತ್ಯಕಲಾವಿದರು ಹೆಜ್ಜೆ ಹಾಕುತ್ತಿದ್ದರು. ಹರ್ಷ ನೃತ್ಯ ನಿರ್ದೇಶನದಲ್ಲಿರುವ ಈ ಹಾಡು ನಾಯಕ, ನಾಯಕಿಗೆ ಪ್ರೇಮ ನಿವೇದನೆ ಮಾಡುವ ಕಾನ್ಸೆಪ್ಟ್ ಹೊಂದಿದೆ.
ಜೀವನದಲ್ಲಿ ನಮಗಿರುವ ಆಸೆ ಒಂದಾಗಿದ್ದರೆ, ನಡೆವುದೇ ಬೇರೆಯಾಗಿರುತ್ತದೆ. ಆ ರೀತಿಯ ಘಟನೆ ನಾಯಕನ ಜೀವನದಲ್ಲಿ ಆದಾಗ ಆತ ಭ್ರಮನಿರಸನಗೊಂಡು ಹುಚ್ಚನಾಗುತ್ತಾನೆ. ನಾಯಕ ವಿಜಯ್ ಈ ಪಾತ್ರವನ್ನು ತುಂಬಾ ಚೆನ್ನಾಗಿ ಮಾಡಿದ್ದಾರೆ ಎನ್ನುತ್ತಾರೆ ನಿರ್ದೇಶಕ ಮಾದೇಶ್. ಸಾಧು ಕೋಕಿಲಾರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಶರ್ಮಿಳಾ ಮಾಂಡ್ರೆ ಹಾಗೂ ಯಜ್ಞ ಶೆಟ್ಟಿ ಇಬ್ಬರು ನಾಯಕಿಯರಿದ್ದು, ಜೈಜಗದೀಶ್, ರಂಗಾಯಣ ರಘು, ಸಂಗೀತ, ಸುಧಾ ಬೆಳವಾಡಿ ಪ್ರಮುಖ ಪಾತ್ರದಲ್ಲಿದ್ದಾರೆ.