Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಮೇಕ್ ಚಿತ್ರಗಳತ್ತ ಪಾರ್ವತಮ್ಮ ಒಲವು, ಸಾಹಿತಿಗಳ ಟೀಕೆ
ಬೆಂಗಳೂರು : ರಿಮೇಕ್ ಚಿತ್ರಗಳಿಗೆ ಸರ್ಕಾರ ತೆರಿಗೆ ವಿನಾಯಿತಿ ನೀಡುವ ವಿಚಾರ, ಮತ್ತೊಂದು ಸುತ್ತಿನ ಚರ್ಚೆಗೆ ದಾರಿ ಮಾಡಿದೆ.
ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಾರ್ತಾಸಚಿವ ಬಿ.ಶಿವರಾಂ ಅಧ್ಯಕ್ಷತೆಯಲ್ಲಿ , ನಗರದ ಬಾದಾಮಿ ಹೌಸ್ನಲ್ಲಿ ಸಭೆ ನಡೆಯಿತು. ಈ ವಿಚಾರದಲ್ಲಿ ಸಭೆಯಲ್ಲಿ ಏಕಾಭಿಪ್ರಾಯ ಮೂಡಲಿಲ್ಲ. ಸಭೆಯಲ್ಲಿ ಚಿತ್ರರಂಗದ ಗಣ್ಯರು ಮತ್ತು ಸಾಹಿತಿಗಳು ಪಾಲ್ಗೊಂಡಿದ್ದರು.
ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಮಾತನಾಡಿ, ಕನ್ನಡದಲ್ಲಿ ಒಳ್ಳೆ ಕಥೆಗಳ ಕೊರತೆಯಿದೆ. ಹೀಗಾಗಿ ರಿಮೇಕ್ ಮಾಡುವುದು ತಪ್ಪೇನಲ್ಲ. ಈ ಚಿತ್ರಗಳಿಗೂ ಶೇ.100ರಷ್ಟು ತೆರಿಗೆ ವಿನಾಯಿತಿ ನೀಡಬೇಕು. ರಿಮೇಕ್ ಚಿತ್ರಗಳಿಂದ ಸಂಸ್ಕೃತಿ ಹಾಳಾಗುವುದಿಲ್ಲ ಎಂದರು.
ಪಾರ್ವತಮ್ಮ ಅವರ ವಾದಕ್ಕೆ ನಿರ್ಮಾಪಕ ಸಾ.ರಾ.ಗೋವಿಂದ್, ರಾಕ್ಲೈನ್ ವೆಂಕಟೇಶ್, ಸಂದೇಶ್ ನಾಗರಾಜ್ ಧ್ವನಿಗೂಡಿಸಿದರು.
ರಿಮೇಕ್ ಚಿತ್ರಗಳಿಗೆ ತೆರಿಗೆ ವಿನಾಯಿತಿ ನೀಡುವ ವಾದಕ್ಕೆ ನಿರ್ದೇಶಕ ಗಿರೀಶ್ ಕಾಸರವಳಳಿ, ಡಾ.ಚಂದ್ರಶೇಖರ ಕಂಬಾರ, ಎಂ.ಎಸ್.ಸತ್ಯ, ಟಿ.ಎಸ್.ನಾಗಾಭರಣ, ಬರಗೂರು ರಾಮಚಂದ್ರಪ್ಪ, ಯು.ಆರ್.ಅನಂತಮೂರ್ತಿ ಮತ್ತಿತರರು ವಿರೋಧ ವ್ಯಕ್ತಪಡಿಸಿದರು.
ಸಹಮತ : ಚಿತ್ರನಗರಿ ನಿರ್ಮಾಣ, ಪುಟ್ಟಣ್ಣ ಕಣಗಾಲ್ ಚಿತ್ರಮಂದಿರದ ಅಭಿವೃದ್ಧಿ ಮತ್ತಿತರ ವಿಚಾರಗಳಿಗೆ ಸಭೆಯಲ್ಲಿ ಸಹಮತ ವ್ಯಕ್ತವಾಯಿತು.
ರಿಮೇಕ್ ಚಿತ್ರಗಳ ಬಗೆಗೆ ನಿಮ್ಮ ಒಲವು ನಿಲುವು ನಮಗೆ ಬರೆಯಿರಿ
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್