For Quick Alerts
For Daily Alerts
Don't Miss!
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಥೆ, ಚಿತ್ರಕಥೆ ಮತ್ತು ಸಂಭಾಷಣೆ-ಉಪೇಂದ್ರ
News
oi-Staff
By Staff
|
ಕೆ.ಸಾಗರ್ ಮತ್ತು ಕೆವಿ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶೀರ್ಷಿಕೆ ಇನ್ನು ಇಟ್ಟಿಲ್ಲ. ಸಜ್ಜನ್ ರಾವ್ ವೃತ್ತದ ಶ್ರೀ ಸುಬ್ರಮಣ್ಯೇಶ್ವರ ದೇವಾಲಯದಲ್ಲಿ ಮುಹೂರ್ತ ಮುಗಿಸಿಕೊಂಡಿರುವ ಈ ಚಿತ್ರ ಶೀಘ್ರದಲ್ಲೇ ಸೆಟ್ಟೇರಲಿದೆ. ಉಪೇಂದ್ರ ಚಿತ್ರಕಥೆ ಎಂದರೆ ಹೊಸತನ, ಭಾವನೆಗಳ ತುಯ್ದಾಟ, ಪ್ರೇಕ್ಷಕರನ್ನು ಹುಚ್ಚೆಬ್ಬಿಸುವ ಸಂಭಾಷಣೆಗಳು ನೆನಪಾಗುತ್ತವೆ. ಈ ಜೀವಂತಿಕೆಯನ್ನೇ ಪ್ರೇಕ್ಷಕರೂ ನಿರೀಕ್ಷಿಸುತ್ತಾರೆ.
ತೆಲುಗಿನ ಸಾಕಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಸಂಪತ್ ನಂದಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಜಾನಿ ಲಾಲ್ ಛಾಯಾಗ್ರಹಣ ಮತ್ತು ಗುರು ಕಿರಣ್ ಸಂಗೀತ ಈ ಚಿತ್ರಕ್ಕಿದೆ. ಹೆಚ್ ಟುಓ ಚಿತ್ರದ ನಂತರ ಉಪೇಂದ್ರ ಯಾಕೋ ಏನೋ ಚಿತ್ರಕಥೆ, ಸಂಭಾಷಣೆ ಬರೆಯುವುದನ್ನು ಮರೆತೆ ಬಿಟ್ಟಿದ್ದರು. ಅಂದಹಾಗೆ ಈ ಚಿತ್ರಕ್ಕೆ ಉಪೇಂದ್ರ ಅವರೆ ನಾಯಕ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Thursday, December 18, 2008, 18:54 [IST]
Other articles published on Dec 18, 2008