Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ಮಡಿಲಲ್ಲಿ 'ಕೃಷ್ಣನ್ ಲವ್ ಸ್ಟೊರಿ'
ಕರ್ನಾಟಕದ ಜೀವನದಿ ಕಾವೇರಿ. ಈ ನದಿ ಹರಿಯುವ ಕಡೆ ಹಸಿರಿನ ಸಿರಿ. ಪ್ರಸಿದ್ಧ ಜಲಪಾತವೆಂದೂ ಖ್ಯಾತಿ ಪಡೆದಿರುವ, ಪ್ರವಾಸಿಗರ ಸ್ವರ್ಗವೆನಿಸಿರುವ ಹೊಗೇನಕಲ್ ಜಲಪಾತದಲ್ಲಿ ಕಾವೇರಿಯ ವೈಭವ ವರ್ಣಿಸಲು ಅಸಾಧ್ಯ. ಇಂಥ ರಮಣೀಯ ಪರಿಸರದಲ್ಲಿ ಅಜಯ್ ಹಾಗೂ ರಾಧಿಕಾಪಂಡಿತ್ ಜೋಡಿಯ 'ಕೃಷ್ಣನ್ ಲವ್ ಸ್ಟೊರಿ' ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
ಕರ್ನಾಟಕ ಸೇರಿದಂತೆ ನೆರೆಯ ತಮಿಳುನಾಡು ಹಾಗೂ ಕೇರಳದಲ್ಲಿ ಚಿತ್ರೀಕರಣ ನಡೆದಿರುವ ಈ ಚಿತ್ರದ ನಿರ್ದೇಶಕ ಶಶಾಂಕ್. ಚಿತ್ರಕ್ಕೆ ಕಥೆ, ಚಿತ್ರಕಥೆ ರಚನೆ ಕೂಡ ಇವರದೆ. ಹಿಂದೆ ಇವರು ನಿರ್ದೇಶಿಸಿದ ಎರಡು ಚಿತ್ರಗಳು ಯಶಸ್ಸು ಕಂಡಿತ್ತು.ಶ್ರೀವೆಂಕಟೇಶ್ವರ ಕೃಪ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್.ಕೆ.ಮೆಹ್ತ ಹಾಗೂ ಮೋಹನ್.ಜಿ.ನಾಯಕ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಯೋಗೀಶ್ ಹುಣಸೂರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ವಿ.ಶ್ರೀಧರ್ ಸಂಗೀತ, ಶೇಖರ್ ಚಂದ್ರ ಛಾಯಾಗ್ರಹಣ, ಎಂ.ಎಲ್.ಪ್ರಸನ್ನ ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸವಿರುವ 'ಕೃಷ್ಣನ್ ಲವ್ ಸ್ಟೊರಿಗೆ ಸಿ.ಎಚ್.ಸುರೇಶ್ ಮತ್ತು ಲೋಕೇಶ್ ಆವರ ಸಹ ನಿರ್ಮಾಣವಿದೆ.