Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಂದ ಜೊತೆ ಜಾಲಿಡೇಸ್ ತೆರೆಗೆ ಸಿದ್ಧ
ಕೆ.ಕೆ.ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಶಿವರಾಜಕುಮಾರ್ ಅಭಿನಯದ 'ನಂದ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ಮಾಪಕ ಮಾಹಿನ್ ಚಿತ್ರದ ಕತೆಗಾರರೂ ಕೂಡ. ಮಾಹಿನ್ ಅವರ ಜೀವನದಲ್ಲಿ ನಡೆದ ನೈಜಕತೆಗೆ ನಿರ್ದೇಶಕ ಅನಂತರಾಜು ಚಿತ್ರಕತೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅಶ್ವಿನಿ ಆಡಿಯೋ ಮೂಲಕ ಹಾಡಾಗಿ ಬಂದಿರುವ 'ನಂದ'ನಿಗೆ ಮಾರುಕಟ್ಟೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸ್ವದೇಶದಲ್ಲಲ್ಲದೆ ವಿದೇಶದಲ್ಲೂ ಚಿತ್ರೀಕರಣವಾಗಿರುವ ಈ ಚಿತ್ರದಲ್ಲಿ ಶಿವರಾಜಕುಮಾರ್ ನಾಯಕನ ಪಾತ್ರ ನಿರ್ವಹಿಸಿದರೆ ಕಾದಲ್ ಖ್ಯಾತಿಯ ಸಂಧ್ಯಾ ಹಾಗೂ ಮೈತ್ರೇಯಿ 'ನಂದ'ನ ನಾಯಕಿಯರಾಗಿದ್ದಾರೆ. ನಿರ್ಮಾಪಕ ಮಾಹಿನ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ
ರಮೇಶ್ಬಾಬು ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿ.ಮನೋಹರ್ ಅವರ ಸಂಗೀತವಿದೆ, ಎಸ್.ಮನೋಹರ್ ಸಂಕಲನ, ಮಾಹಿನ್ ಕತೆ, ಪಳನಿರಾಜ್ ಸಾಹಸ, ಇಸ್ಮಾಯಿಲ್ ಕಲೆ ಹಾಗೂ ರಾಮು, ಗಂಡಸಿ ನಾಗರಾಜ್ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಸಂಧ್ಯಾ, ಮೈತ್ರೇಯಿ, ಶರಣ್, ಮಿಥನ್ತೇಜಸ್ವಿ, ಮಾಹಿನ್, ಜ್ಯೋತಿ, ಶ್ರೀನಾಥ್ ಮುಂತಾದವರಿದ್ದಾರೆ.
ಜಾಲಿಡೇಸ್
ಯಂಗ್ ಡ್ರೀಂಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ 'ಜಾಲಿಡೇಸ್ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಳೆ ಹೃದಯಗಳ ಮೋಜಿನ ದಿನಗಳು ಎಂ.ಡಿ.ಶ್ರೀಧರ್ ಅವರ ನಿರ್ದೇಶನದಲ್ಲಿ ಉತ್ತಮವಾಗಿ ಮೂಡಿ ಬಂದಿದೆ ಎಂದು ನಿರ್ಮಾಪಕ ಮಾದಿರೆಡ್ಡಿ ಪರಮ್ ತಿಳಿಸಿದ್ದಾರೆ. ಮಿಕ್ಕಿ.ಜೆ.ಮಯೂರ್ ಅವರ ಸಂಗೀತ ಸಂಯೋಜಿಸಿರುವ ಚಿತ್ರದ ಹಾಡುಗಳು ಕೇಳುಗರ ಮನಸೂರೆಗೊಂಡಿದೆ. ಅತ್ಯುತ್ತಮ ಸ್ಥಳಗಳಲ್ಲಿ ಚಿತ್ರೀಕೃತವಾಗಿರುವ ಜಾಲಿಡೇಸ್ ಯುವ ಪೀಳಿಗೆ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಹಿಡಿಸಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಎಂ.ಡಿ.ಶ್ರೀಧರ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಕೃಷ್ಣಕುಮಾರ್ ಅವರ ಛಾಯಾಗ್ರಹಣವಿದೆ. ಮಿಕ್ಕಿ ಜೆ ಮಯೂರ್ ಸಂಗೀತ, ಪಿ.ಆರ್.ಸೌಂದರ್ರಾಜ್ ಸಂಕಲನ, ಬಿ.ಎ.ಮಧು ಸಂಭಾಷಣೆ, ಕವಿರಾಜ್ ಗೀತರಚನೆ ಹಾಗೂ ರಂಗಸ್ವಾಮಿ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ವಿಶ್ವಾಸ್, ದೀಪು, ಪ್ರವೀಣ್, ನಿರಂಜನ್, ಐಶ್ವರ್ಯನಾಗ್, ಋತ್ವ, ಸ್ಪೂರ್ತಿ, ಕೀರ್ತಿ, ಋತಿಕಾ, ಸುಚೇಂದ್ರಪ್ರಸಾದ್, ಕಿಶೋರಿಬಲ್ಲಾಳ್, ಶ್ರೀರಾಘವ್ ಮುಂತಾದವರಿದ್ದಾರೆ.
(ದಟ್ಸ್
ಸಿನಿ
ಸುದ್ದಿ)
ಗ್ಯಾಲರಿ:ಐಶ್ವರ್ಯನಾಗ್
||
ಸಂಧ್ಯಾ
||
ಶಿವರಾಜಕುಮಾರ್