Don't Miss!
- News HSRP; ಸಾರಿಗೆ ಇಲಾಖೆಯಿಂದ ಮಹತ್ವದ ಮಾಹಿತಿ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಯ ಚಾಮಯ್ಯ ಮೇಷ್ಟ್ರು ಕೆ ಎಸ್ ಅಶ್ವತ್ಥ್
ವರನಟ ಡಾ.ರಾಜ್ ಕುಮಾರ್ ಅವರೊಂದಿಗೆ ಅಶ್ವತ್ಥ್ ಬರೋಬ್ಬರಿ 100 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಿಂದ ಅಶ್ವತ್ಥ್ 1994ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದರು. ಆ ಬಳಿಕ ಡಾ.ರಾಜ್ ಕುಮಾರ್ ಅವರ ಒತ್ತಾಯದ ಮೇರೆಗೆ 2000ನೇ ಇಸವಿಯಲ್ಲಿ ಮತ್ತೆ 'ಶಬ್ದವೇದಿ' ಚಿತ್ರಕ್ಕಾಗಿ ಬಣ್ಣಬಳಿದುಕೊಂಡಿದ್ದರು.
'ನಾಗಹಾವು' ಚಿತ್ರದಲ್ಲಿ ರಾಮಾಚಾರಿಯಾಗಿ ನಟಿಸಿದ್ದ ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಚಾಮಯ್ಯ ಮೇಷ್ಟ್ರಾಗಿ ಅಶ್ವತ್ಥ್ ಮರೆಯಲಾದಅಭಿನಯ ನೀಡಿದ್ದರು. ವಿಷ್ಣು ಜೊತೆ ಅಶ್ವತ್ಥ್ ಅಭಿನಯಿಸಿದ ಕೊನೆಯ ಚಿತ್ರ 'ಸಿರಿವಂತ'. ಇದಕ್ಕೂ ಮುನ್ನ 'ಮೈಸೂರು ಹುಡುಗ'ದರ್ಶನ್ ಗೆ ಅಜ್ಜನಾಗಿ 'ಭೂಪತಿ' ಚಿತ್ರದಲ್ಲಿ ಅಶ್ವತ್ಥ್ ಕಾಣಿಸಿಕೊಂಡಿದ್ದರು.
ಅರವತ್ತರ ದಶಕದಲ್ಲಿ ಹಿರಿಯ ನಟಿ ಪಂಡರಿಬಾಯಿ ಹಾಗೂ ಡಾ.ಲೀಲಾವತಿ ಅವರ ಜತೆ ಅಶ್ವತ್ಥ್ ಜೋಡಿ ಜನಪ್ರಿಯವಾಗಿತ್ತು. 'ಪಂಚಾಮೃತ', 'ಜೇನುಗೂಡು' ಮತ್ತು 'ನಮ್ಮ ಮಕ್ಕಳು' ಚಿತ್ರಗಳು ಅಶ್ವತ್ಥ್ ಅವರ ಜನಪ್ರಿಯ ಚಿತ್ರಗಳು. ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಕರ್ನಾಟಕ ಸರಕಾರದ ಪ್ರತಿಷ್ಠಿತ ಡಾ.ರಾಜ್ ಕುಮಾರ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಅಶ್ವತ್ಥ್ ಅವರಿಗೆ ಲಭಿಸಿವೆ. ಎರಡು ಬಾರಿ ರಾಜ್ಯ ಸರಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೂ ಅಶ್ವತ್ಥ್ ಭಾಜನರಾಗಿದ್ದಾರೆ.