Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಯ ಚಾಮಯ್ಯ ಮೇಷ್ಟ್ರು ಕೆ ಎಸ್ ಅಶ್ವತ್ಥ್
ವರನಟ ಡಾ.ರಾಜ್ ಕುಮಾರ್ ಅವರೊಂದಿಗೆ ಅಶ್ವತ್ಥ್ ಬರೋಬ್ಬರಿ 100 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಿಂದ ಅಶ್ವತ್ಥ್ 1994ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದರು. ಆ ಬಳಿಕ ಡಾ.ರಾಜ್ ಕುಮಾರ್ ಅವರ ಒತ್ತಾಯದ ಮೇರೆಗೆ 2000ನೇ ಇಸವಿಯಲ್ಲಿ ಮತ್ತೆ 'ಶಬ್ದವೇದಿ' ಚಿತ್ರಕ್ಕಾಗಿ ಬಣ್ಣಬಳಿದುಕೊಂಡಿದ್ದರು.
'ನಾಗಹಾವು' ಚಿತ್ರದಲ್ಲಿ ರಾಮಾಚಾರಿಯಾಗಿ ನಟಿಸಿದ್ದ ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಚಾಮಯ್ಯ ಮೇಷ್ಟ್ರಾಗಿ ಅಶ್ವತ್ಥ್ ಮರೆಯಲಾದಅಭಿನಯ ನೀಡಿದ್ದರು. ವಿಷ್ಣು ಜೊತೆ ಅಶ್ವತ್ಥ್ ಅಭಿನಯಿಸಿದ ಕೊನೆಯ ಚಿತ್ರ 'ಸಿರಿವಂತ'. ಇದಕ್ಕೂ ಮುನ್ನ 'ಮೈಸೂರು ಹುಡುಗ'ದರ್ಶನ್ ಗೆ ಅಜ್ಜನಾಗಿ 'ಭೂಪತಿ' ಚಿತ್ರದಲ್ಲಿ ಅಶ್ವತ್ಥ್ ಕಾಣಿಸಿಕೊಂಡಿದ್ದರು.
ಅರವತ್ತರ ದಶಕದಲ್ಲಿ ಹಿರಿಯ ನಟಿ ಪಂಡರಿಬಾಯಿ ಹಾಗೂ ಡಾ.ಲೀಲಾವತಿ ಅವರ ಜತೆ ಅಶ್ವತ್ಥ್ ಜೋಡಿ ಜನಪ್ರಿಯವಾಗಿತ್ತು. 'ಪಂಚಾಮೃತ', 'ಜೇನುಗೂಡು' ಮತ್ತು 'ನಮ್ಮ ಮಕ್ಕಳು' ಚಿತ್ರಗಳು ಅಶ್ವತ್ಥ್ ಅವರ ಜನಪ್ರಿಯ ಚಿತ್ರಗಳು. ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಕರ್ನಾಟಕ ಸರಕಾರದ ಪ್ರತಿಷ್ಠಿತ ಡಾ.ರಾಜ್ ಕುಮಾರ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಅಶ್ವತ್ಥ್ ಅವರಿಗೆ ಲಭಿಸಿವೆ. ಎರಡು ಬಾರಿ ರಾಜ್ಯ ಸರಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೂ ಅಶ್ವತ್ಥ್ ಭಾಜನರಾಗಿದ್ದಾರೆ.