Don't Miss!
- News Neha Hiremath: ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದ್ ನಲ್ಲಿ ಮಾಲಾಶ್ರೀ ಮೊಕ್ಕಾಂ
ರಾಮು ಎಂಟರ್ಪ್ರೈಸಸ್ನಲ್ಲಿ ರಾಮು ನಿರ್ಮಿಸುತ್ತಿರುವ ಅದ್ದೂರಿ 'ವೀರ' ಚಿತ್ರದ ಚಿತ್ರೀಕರಣವು ಬೆಂಗಳೂರಿನಲ್ಲಿ 45 ದಿವಸಗಳ ಚಿತ್ರೀಕರಣಮುಗಿಸಿ, ಚಿತ್ರತಂಡವು ಹೈದರಾಬಾದ್ಗೆ ತೆರಳಿತು. ಇದೇ ಸೋಮವಾರದಿಂದ ಹೈದರಾಬಾದ್ನಲ್ಲಿ ಚಿತ್ರೀಕರಣ ಮುಂದುವರೆಯಲಿದೆ.
ಸುಮಾರು 15 ದಿವಸಗಳ ಕಾಲ ಹೈದರಾಬಾದ್ ನಗರದ ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು, ಮೈನವಿರೇಳಿಸುವ ಚೇಸಿಂಗ್ ಹಾಗೂ ಹೊಡೆದಾಟದ ಸನ್ನಿವೇಶಗಳನ್ನು ಚಿತ್ರಿಸಿಕೊಳ್ಳಲಾಗುವುದೆಂದು ತಿಳಿಸಿರುವ ನಿರ್ಮಾಪಕ ರಾಮು, ಹೈದರಾಬಾದ್ ಚಿತ್ರೀಕರಣ ನಂತರ ಚಿತ್ರ ತಂಡವು ಮತ್ತಷ್ಟು ಚಿತ್ರೀಕರಣಕ್ಕಾಗಿ ಬ್ಯಾಂಕಾಕ್, ಮಕಾವೋಗೆ ತೆರಳಲಿದೆ ಎಂದು ತಿಳಿಸಿದ್ದಾರೆ.
ಚಿತ್ರಕ್ಕೆ ರವಿ ಶ್ರೀವತ್ಸ ಸಂಭಾಷಣೆ, ವರದನ್ (ಜೋಷ್ ಖ್ಯಾತಿ) ಸಂಗೀತ, ರಾಜೇಶ್ (ಬಾಂಬೆ) ಛಾಯಾಗ್ರಹಣ, ಇಮ್ರಾನ್ ನೃತ್ಯ, ರಾಮ್ಲಕ್ಷ್ಮಣ್ ರಾಖೀ ರಾಜೇಶ್, ವಿಜಯ್ ಸಾಹಸ, ರಮೇಶ್ಬಾಬು ನಿರ್ಮಾಣ ನಿರ್ವಹಣೆ ಶೇಷು ನಿರ್ದೇಶನ ಸಹಕಾರವಿದ್ದು, ಆಯುಧ, ಚಾಮುಂಡಿ, ಚಿತ್ರಗಳನ್ನು ನಿರ್ದೇಶಿಸಿದ ಅಯ್ಯಪ್ಪ ಪಿ. ಶರ್ಮ, ಚಿತ್ರವನ್ನು ನಿರ್ದೇಶಿಸುತ್ತಿದ್ದು, ಎಂ.ಕೆ. ಶರ್ಮ ಆಗಿ ಪರಿಚಯವಾಗಲಿದ್ದಾರೆ.
ತಾರಾಗಣದಲ್ಲಿ ಮಾಲಾಶ್ರೀ, ರಾಧಿಕಾಗಾಂಧಿ, ಕೋಮಲ್ಕುಮಾರ್, ಆಶಿಷ್ ವಿದ್ಯಾರ್ಥಿ, ಸಯ್ಯಾಜಿ ಶಿಂಧೆ, ರಾಹುಲ್ದೇವ್ (ಬಾಂಬೆ) ಸಿ.ಆರ್. ಸಿಂಹ, ಸತ್ಯ (ಹೈದರಾಬಾದ್) ಶರಣ್ (ಹೈದರಾಬಾದ್) ದೊಡ್ಡಣ್ಣ, ಸಾಧುಕೋಕಿಲ, ಸತ್ಯಜಿತ್, ಹೆಚ್.ಎಂ.ಟಿ. ನಂದ ಮುಂತಾದವರಿದ್ದಾರೆ.