Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷಮ ಸ್ಥಿತಿಯಲ್ಲಿ ಗಾಯಕ ಸಿ. ಅಶ್ವತ್ಥ್
ಗುರುವಾರ ಬೆಳಗ್ಗೆಯ ತನಕ ಆರೋಗ್ಯವಾಗಿಯೇ ಇದ್ದ ಅಶ್ವತ್ಥ್ ಅವರಿಗೆ ಮಧ್ಯಾಹ್ನ ಇದ್ದಕ್ಕಿಂದ್ದಂತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತು. ಹೊಟ್ಟೆ ನೋವು ಹೆಚ್ಚಾದ ಕಾರಣ ಚಿಕಿತ್ಸೆಗಾಗಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮಧ್ಯರಾತ್ರಿವರೆಗೂ ಅಶ್ವತ್ಥ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮೂಲಗಳು ತಿಳಿಸಿವೆ.
ಪಿತ್ತಕೋಶದ ತೊಂದರೆಯಿಂದಾಗಿ ಒಂದು ವಾರದ ಹಿಂದಷ್ಟೇ ಇದೇ ಆಸ್ಪತ್ರೆಯಲ್ಲಿ ಅಶ್ವತ್ಥ್ ಚಿಕಿತ್ಸೆ ಪಡೆದಿದ್ದರು. ತೀವ್ರ ನಿಗಾ ಘಟಕದಲ್ಲಿರುವ ಅವರನ್ನು ನಾಲ್ವರು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇದೇ ಡಿ.29ಕ್ಕೆ ಅಶ್ವಥ್ ಅವರು 70ನೇ ವರ್ಷಕ್ಕೆ ಅಡಿಯಿಡುತ್ತಿದ್ದಾರೆ.
ಅವರ ಜನುಮದಿನವನ್ನು ಅದ್ದ್ದೂರಿಯಾಗಿ ಆಚರಿಸಲು ಅವರ ಅಭಿಮಾನಿಗಲು ನಿರ್ಧರಿಸಿದ್ದಾರೆ. ಡಿ.29ರಂದು ಸುತ್ತೂರು ಶ್ರೀಗಳು ಹಾಗೂ ವೀರೇಂದ್ರ ಹೆಗ್ಗಡೆ ಅವರಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಮ್ಮ ಹುಟ್ಟುಹಬ್ಬದ ದಿನ ಸ್ವತಃ ಅಶ್ವತ್ಥ್ ಅವರೇ ಹಾಡಲಿದ್ದಾರೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸೋಣ.