Don't Miss!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- News ಚಿಕ್ಕಬಳ್ಳಾಪುರದಲ್ಲಿ ಮತಭೇಟೆ ಆರಂಭ: ದೇವಾಂಗ ಮಠದ ದಯಾನಂದಪುರಿ ಸ್ವಾಮೀಜಿ ಭೇಟಿಯಾದ ಡಾ.ಕೆ. ಸುಧಾಕರ್
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಮಗಳು ಹೆತ್ತವರ ಕಣ್ತಪ್ಪಿಸಿ ಮದುವೆಯಾದ ಕತೆ!
ಹೈದರಾಬಾದ್, ಅ.18 : ಇದು ಸಿನಿಮಾ ಕತೆಯಲ್ಲ.. ಸಿನಿಮಾ ಆಗಬಲ್ಲ ಎಲ್ಲಾ ಅರ್ಹತೆಗಳಿರುವ ಕತೆ!
ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಅವರ ಮುದ್ದಿನ ಕುವರಿ ಶ್ರೀಜಾ, ಅಪ್ಪ ಅಮ್ಮನ ಮಾತು ಮೀರಿ ಅಂತರ್ಜಾತಿ ವಿವಾಹಕ್ಕೆ ಜೈ ಎಂದಿದ್ದಾರೆ. ಅಪ್ಪಅಮ್ಮ ಬೆಳಗಿನ ನಿದ್ದೆಯಲ್ಲಿದ್ದಾಗಲೇ ಎದ್ದ ಶ್ರೀಜಾ(18), ಮನೆಬಿಟ್ಟು ಪರಾರಿ.. ತನ್ನ ಪ್ರಿಯಕರನ ಜೊತೆ ಹಸೆಮಣೆ ಏರುವ ಸಡಗರ ಆಕೆಗೆ.. ಮಗಳು ಕೈಕೊಟ್ಟಳಲ್ಲ ಎನ್ನುವ ನೋವು ಹೆತ್ತವರಿಗೆ.
ಇಂಜಿನಿಯರ್ ಆಗಿರುವ ಶಿರೀಷ್(22) ಅವರನ್ನು ನಗರದ ಆರ್ಯ ಸಮಾಜ ಆಶ್ರಮದಲ್ಲಿ ಬುಧವಾರ(ಅ.17) ವರಿಸಿದ ಶ್ರೀಜಾ, ಜಿರಂಜೀವಿ ಅವರ ಕೊನೆ ಮಗಳು. ಸಿಎ ಓದುತ್ತಿದ್ದ ಶ್ರೀಜಾ ಮತ್ತು ಶಿರೀಷ್ ಅವರದು ನಾಲ್ಕು ವರ್ಷಗಳ ಪ್ರೇಮ. ಪ್ರೇಮಕ್ಕೆ ಹತ್ತಾರು ಅಡ್ಡಿಗಳು. ಪ್ರೀತಿ ಬಿಡಲು ಒಲ್ಲೆ ಎಂದಿದ್ದ ಶ್ರೀಜಾಗೆ, ಗೃಹಬಂಧನ ಸಹಾ ಪ್ರಾಪ್ತಿಯಾಗಿತ್ತು. ಹೀಗಾಗಿ ಹೆತ್ತವರ ಕಣ್ತಪ್ಪಿಸಿ, ಶ್ರೀಜಾ ಮದುವೆಯಾದಳು.
ಚಿರಂಜೀವಿ ಮೊದಲನೇ ಪುತ್ರಿ ವಿವಾಹ ಕಳೆದ ವರ್ಷ ಚೆನ್ನೈನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಎರಡನೇ ಪುತ್ರ ರಾಮ್ ಚರಣ್, ಇತ್ತೀಚೆಗಷ್ಟೇ 'ಚಿರುತ' ಚಿತ್ರದ ಮುಖಾಂತರ ತೆಲುಗು ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ.
(ದಟ್ಸ್ ತೆಲುಗು ವಾರ್ತೆ)