Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರಗಳ ನಿರ್ಮಾಣದತ್ತ ಅನಿಲ್ ಅಂಬಾನಿ
ನವದೆಹಲಿ,ಮೇ 19: ಭಾರಿ ಅಬ್ಬರದೊಂದಿಗೆ ಮನರಂಜನಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ(ಎಡಿಎ) ಸಮೂಹ ಸಂಸ್ಥೆ ಇದೀಗ ಕನ್ನಡ ಚಿತ್ರಗಳ ನಿರ್ಮಾಣಕ್ಕೆ ಮುಂದಾಗಿದೆ. ಕನ್ನಡದ ಕಲಾತ್ಮಕ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಗಿರೀಶ್ ಕಾಸರವಳ್ಳಿ ಮತ್ತು ಎಂ.ಎಸ್.ಸತ್ಯು ಈ ಚಿತ್ರಗಳ ನಿರ್ದೇಶನದ ಹೊಣೆ ಹೊತ್ತುಕೊಂಡಿದ್ದಾರೆ.
ಕನ್ನಡದ ಎರಡು ಚಿತ್ರಗಳನ್ನು ನಿರ್ದೇಶಿಸಲು ಗಿರೀಶ್ ಕಾಸರವಳ್ಳಿ ಮತ್ತು ಎಂ.ಎಸ್.ಸತ್ಯು ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಎಡಿಎ ಸಂಸ್ಥೆ ಅಡಿಯಲ್ಲಿ ಸತ್ಯು ನಿರ್ದೇಶನದ 'ಇಜ್ಜೋಡು' ಚಿತ್ರದ ಚಿತ್ರೀಕರಣ ಶೀಘ್ರದಲ್ಲಿ ಆರಂಭವಾಗಲಿದೆ. ಚಿತ್ರದಲ್ಲಿ ಅನಿರುದ್ಧ ನಾಯಕ ನಟನಾಗಿ ಮತ್ತು ಡೈಸಿ ಬೋಪಣ್ಣ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶಿಸಲಿರುವ ಚಿತ್ರದ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ.
ಅಂಬಾನಿ ಗ್ರೂಪ್ ಇಷ್ಟು ದಿನಗಳ ಕಾಲ ದೊಡ್ಡ ದೊಡ್ಡ ಕೈಗಾರಿಕೆಗಳು ಮತ್ತು ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ ನಂತಹ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿತ್ತು. ಅನಿಲ್ ಅಂಬಾನಿ ತಮ್ಮ ಸಂಸ್ಥೆಯ ಕಾರ್ಯಕ್ಷೇತ್ರವನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದು, ಇದೀಗ ಚಿತ್ರ ನಿರ್ಮಾಣಕ್ಕೂ ಕೈಹಾಕಿದ್ದಾರೆ. ದೇಶದ 9 ವಿವಿಧ ಭಾಷೆಗಳ 69 ಚಿತ್ರಗಳನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕಾಗಿ ಸುಮಾರು 75 ಶತಕೋಟಿ ಡಾಲರ್ಗಳ ಬಂಡವಾಳ ಹೂಡಿದ್ದಾರೆ. ವಾಣಿಜ್ಯ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಚಿತ್ರಗಳನ್ನು ನಿರ್ಮಿಸಲಾಗುವುದು. ಆಯಾ ಭಾಷೆಗಳ ಹೆಸರಾಂತ ನಿರ್ದೇಶಕರನ್ನು ಗುರುತಿಸಿ ಅಂತಹ ನಿರ್ದೇಶಕರಿಗೆ ಚಿತ್ರ ನಿರ್ದೇಶನದ ಜವಾಬ್ದಾರಿಯನ್ನು ವಹಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
(ಏಜೆನ್ಸೀಸ್)