twitter
    For Quick Alerts
    ALLOW NOTIFICATIONS  
    For Daily Alerts

    ನಿರ್ಮಾಪಕಿ ಶಿಲ್ಪಾ ಗಣೇಶ್ ವಿರುದ್ಧ ದೂರು

    By Staff
    |

    'ಮಳೆಯಲಿ ಜೊತೆಯಲಿ' ಹಾಗೂ 'ಮಳೆಬಿಲ್ಲೇ' ಚಿತ್ರದ ನಿರ್ಮಾಪಕರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾರಣ, ಆ ಚಿತ್ರಗಳ ಸಿನಿಮಾ ಭಿತ್ತಿ ಚಿತ್ರಗಳನ್ನು ಗೋಡೆಗೆ ಅಂಟಿಸಿ ಬೆಂಗಳೂರು ನಗರದ ಅಂದಚೆಂದವನ್ನು ಕೆಡಿಸಿದ್ದಾರೆ ಎಂಬ ಆರೋಪ.ಈ ಸಂಬಂಧ 'ಮಳೆಯಲಿ ಜೊತೆಯಲಿ' ಹಾಗೂ 'ಮಳೆಬಿಲ್ಲೇ' ಚಿತ್ರದ ನಿರ್ಮಾಪಕರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಾರ್ವಜನಿಕ ಸ್ಥಳಗಳಲ್ಲಿ ಭಿತ್ತಿ ಚಿತ್ರಗಳನ್ನು ಅಂಟಿಸಿ ನಗರದ ಅಂದಗೆಡಿಸುವವರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಪಾಲಿಕೆಅಧಿಕಾರಿಗಳು, ಮಳೆಯಲಿ ಜೊತೆಯಲಿ ನಿರ್ಮಾಪಕಿ ಶಿಲ್ಪಾ ಗಣೇಶ್ ಹಾಗೂ ಮಳೆ ಬಿಲ್ಲೇ ನಿರ್ಮಾಪಕರಾದ ಟಿ.ಎಸ್.ಆನಂದ್ ಮತ್ತು ಎಚ್.ಆರ್.ಕೋದಂಡರಾಮ ಅವರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಂಗಳೂರು ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯ ವಿವೇಕಾನಂದ ಕಾಲೇಜಿನ ಗೋಡೆಯ ಮೇಲೆ ಎರಡೂ ಚಲನಚಿತ್ರಗಳ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

    Saturday, December 19, 2009, 15:09
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X