Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕಿ ಶಿಲ್ಪಾ ಗಣೇಶ್ ವಿರುದ್ಧ ದೂರು
'ಮಳೆಯಲಿ ಜೊತೆಯಲಿ' ಹಾಗೂ 'ಮಳೆಬಿಲ್ಲೇ' ಚಿತ್ರದ ನಿರ್ಮಾಪಕರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾರಣ, ಆ ಚಿತ್ರಗಳ ಸಿನಿಮಾ ಭಿತ್ತಿ ಚಿತ್ರಗಳನ್ನು ಗೋಡೆಗೆ ಅಂಟಿಸಿ ಬೆಂಗಳೂರು ನಗರದ ಅಂದಚೆಂದವನ್ನು ಕೆಡಿಸಿದ್ದಾರೆ ಎಂಬ ಆರೋಪ.ಈ ಸಂಬಂಧ 'ಮಳೆಯಲಿ ಜೊತೆಯಲಿ' ಹಾಗೂ 'ಮಳೆಬಿಲ್ಲೇ' ಚಿತ್ರದ ನಿರ್ಮಾಪಕರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಭಿತ್ತಿ ಚಿತ್ರಗಳನ್ನು ಅಂಟಿಸಿ ನಗರದ ಅಂದಗೆಡಿಸುವವರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಪಾಲಿಕೆಅಧಿಕಾರಿಗಳು, ಮಳೆಯಲಿ ಜೊತೆಯಲಿ ನಿರ್ಮಾಪಕಿ ಶಿಲ್ಪಾ ಗಣೇಶ್ ಹಾಗೂ ಮಳೆ ಬಿಲ್ಲೇ ನಿರ್ಮಾಪಕರಾದ ಟಿ.ಎಸ್.ಆನಂದ್ ಮತ್ತು ಎಚ್.ಆರ್.ಕೋದಂಡರಾಮ ಅವರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯ ವಿವೇಕಾನಂದ ಕಾಲೇಜಿನ ಗೋಡೆಯ ಮೇಲೆ ಎರಡೂ ಚಲನಚಿತ್ರಗಳ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.