Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟ ಆನಂದ್ ಗೆ ಷರತ್ತುಬದ್ಧ ಜಾಮೀನು
ವರದಕ್ಷಿಣಿ ಕಿರುಕುಳ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಕನ್ನಡ ಚಿತ್ರ ನಟ ಆನಂದ್ ಗೆ ಮಂಗಳವಾರ ಷರತ್ತುಬದ್ಧ ಜಾಮೀನು ಲಭಿಸಿದೆ. ಬಸವನಗುಡಿ ಮಹಿಳಾ ಪೊಲೀಸರು ಆನಂದ್ ನನ್ನು ಶುಕ್ರವಾರ (ಮೇ.14) ರಾತ್ರಿ ಬಂಧಿಸಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆನಂದ್ ಪತ್ನಿ ಭರಣಿ ದೂರು ನೀಡಿದ್ದರು.
ಈ ಕುರಿತು ಆನಂದ್ ಜಾಮೀನಿಗಾಗಿ ಬೆಂಗಳೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 2ನೇ ಎಸಿಎಂಎಂ ನ್ಯಾಯಾಲಯ 25 ಸಾವಿರ ರುಪಾಯಿ ಭದ್ರತಾ ಠೇವಣಿ ಪಡೆದು ಆನಂದ್ ಗೆ ಷರತ್ತುಬದ್ಧ ಜಾಮೀನು ನೀಡಿದೆ. ಹದಿನೈದು ದಿನಗಳಿಗೊಮ್ಮೆ ಬಸವನಗುಡಿ ಮಹಿಳಾ ಠಾಣೆಗೆ ಹಾಜರಾಗಿ ಸಹಿ ಹಾಕುವಂತೆ ನ್ಯಾಯಾಲಯ ಆದೇಶಿಸಿದೆ.
ಮೇ.14ರಂದು ಬಂಧನಕ್ಕೆ ಒಳಗಾಗಿದ್ದ ಆನಂದ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದರು. ಆನಂದ್ ಇದುವರೆಗೂ 'ಮನಸುಗಳ ಮಾತು ಮಧುರ' ಹಾಗೂ 'ನನ್ನೆದೆಯ ಹಾಡು' ಎಂಬ ಎರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಬೆಳ್ಳಿತೆರೆಗೆ ಅಡಿಯಿಡುವ ಮುನ್ನ ಕಿರುತೆರೆಯಲ್ಲಿ ನಿರೂಪಕನಾಗಿ ತಮ್ಮ ವೃತ್ತಿಯನ್ನು ಆರಂಭಿಸಿದ್ದರು.