Don't Miss!
- News ಬಿಜೆಪಿಗೆ ಮತ್ತೊಂದು ಆಘಾತ, ಮತ್ತೋರ್ವ ವಿಧಾನ ಪರಿಷತ್ ಸದಸ್ಯ ರಾಜೀನಾಮೆ: ಮಾಜಿ ಸಿಎಂ ಏನಂದ್ರು?
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟ ಆನಂದ್ ಗೆ ಷರತ್ತುಬದ್ಧ ಜಾಮೀನು
ವರದಕ್ಷಿಣಿ ಕಿರುಕುಳ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಕನ್ನಡ ಚಿತ್ರ ನಟ ಆನಂದ್ ಗೆ ಮಂಗಳವಾರ ಷರತ್ತುಬದ್ಧ ಜಾಮೀನು ಲಭಿಸಿದೆ. ಬಸವನಗುಡಿ ಮಹಿಳಾ ಪೊಲೀಸರು ಆನಂದ್ ನನ್ನು ಶುಕ್ರವಾರ (ಮೇ.14) ರಾತ್ರಿ ಬಂಧಿಸಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆನಂದ್ ಪತ್ನಿ ಭರಣಿ ದೂರು ನೀಡಿದ್ದರು.
ಈ ಕುರಿತು ಆನಂದ್ ಜಾಮೀನಿಗಾಗಿ ಬೆಂಗಳೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 2ನೇ ಎಸಿಎಂಎಂ ನ್ಯಾಯಾಲಯ 25 ಸಾವಿರ ರುಪಾಯಿ ಭದ್ರತಾ ಠೇವಣಿ ಪಡೆದು ಆನಂದ್ ಗೆ ಷರತ್ತುಬದ್ಧ ಜಾಮೀನು ನೀಡಿದೆ. ಹದಿನೈದು ದಿನಗಳಿಗೊಮ್ಮೆ ಬಸವನಗುಡಿ ಮಹಿಳಾ ಠಾಣೆಗೆ ಹಾಜರಾಗಿ ಸಹಿ ಹಾಕುವಂತೆ ನ್ಯಾಯಾಲಯ ಆದೇಶಿಸಿದೆ.
ಮೇ.14ರಂದು ಬಂಧನಕ್ಕೆ ಒಳಗಾಗಿದ್ದ ಆನಂದ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದರು. ಆನಂದ್ ಇದುವರೆಗೂ 'ಮನಸುಗಳ ಮಾತು ಮಧುರ' ಹಾಗೂ 'ನನ್ನೆದೆಯ ಹಾಡು' ಎಂಬ ಎರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಬೆಳ್ಳಿತೆರೆಗೆ ಅಡಿಯಿಡುವ ಮುನ್ನ ಕಿರುತೆರೆಯಲ್ಲಿ ನಿರೂಪಕನಾಗಿ ತಮ್ಮ ವೃತ್ತಿಯನ್ನು ಆರಂಭಿಸಿದ್ದರು.