Don't Miss!
- News ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಂದಿನಿ ಲೇಔಟ್ ನಲ್ಲಿ ಗರಿಬಿಚ್ಚಿಕೊಂಡ ಗಿಲ್ಲಿ!
ಜಗ್ಗೇಶ್ರ ಪುತ್ರ ಗುರುರಾಜ್ ನಾಯಕನಾಗಿ ಅಭಿನಯಿಸುತ್ತಿದ್ದು, ಉತ್ತರ ಭಾರತ ಮೂಲದ ರಾಕುಲ್ ಪ್ರೀತ್ ಸಿಂಗ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ದುರಂತ ಪ್ರೇಮಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಹುಡುಗಿಯರನ್ನು ರೇಗಿಸುತ್ತಾ ಉಂದಾಡಿಯಾಗಿದ್ದ ನಾಯಕನ ಮನಸ್ಥಿತಿಯನ್ನು ಸುಂದರ ಹುಡುಗಿಯೊಬ್ಬಳು ಬದಲಾಯಿಸುತ್ತಾಳೆ. ನಂದಿನಿ ಲೇ ಔಟ್ ಸುತ್ತಮುತ್ತ ಹೆಚ್ಚಿನ ಭಾಗದ ಚಿತ್ರೀಕರಣ ಮಾಡಲಾಗಿದ್ದು, 40 ದಿನಗಳಲ್ಲಿ 5 ಹಾಡುಗಳು ಹಾಗೂ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ.
ನಾಯಕನ ಪರಿಚಯದ ಹಾಡೊಂದು ಮಾತ್ರ ಬಾಕಿ ಇದೆ. ಆಕಾಶ್ ಧ್ವನಿಗ್ರಹಣ ಕೇಂದ್ರದಲ್ಲಿ ಕಳೆದ 15 ದಿನಗಳಿಂದ ಮಾತುಗಳ ಮರುಲೇಪನ ಕಾರ್ಯ ನಡೆದು ಅದೂ ಮುಗಿದಿದ್ದು, ಮುಂದಿನ ವಾರದಿಂದ ರೀ-ರೆಕಾರ್ಡಿಂಗ್ಗೆ ಹೋಗಲು ಅಣಿಯಾಗುತ್ತಿದೆ. ಮೇ ಅಂತ್ಯದಲ್ಲಿ ಧ್ವನಿಸುರುಳಿ ಬಿಡುಗಡೆಯಾಗಿ, ಜೂನ್ ಅಂತ್ಯದಲ್ಲಿ ಗಿಲ್ಲಿ ಪ್ರೇಕ್ಷಕರ ಮುಂದೆ ಹಾಜರಾಗಲಿದ್ದಾನೆ.
ಮಳೆ ಮೋಡಿಗಾರ ಕೃಷ್ಣ ಇಲ್ಲಿಯೂ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಮೂಲ ಚಿತ್ರಕ್ಕೆ ಸಂಗೀತ ನೀಡಿದ್ದ ಯುವನ್ ಶಂಕರ್ ರಾಜಾ ಅವರೇ ಈ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುಧಾ ಬೆಳವಾಡಿ, ವೀಣಾ ವೆಂಕಟೇಶ್, ಶ್ರೀನಿವಾಸ್ ಅಲ್ಲದೆ, ಜಗ್ಗೇಶ್ರ ಇನ್ನೊಬ್ಬ ಪುತ್ರ ಯತಿರಾಜ್ ಪ್ರಮುಖ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)