Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೂ ನಿರ್ಮಾಪಕ ದಿನೇಶ್ ಗಾಂಧಿ ಸ್ಮೈಲ್ಸ್
ಸದ್ಯಕ್ಕೆ ಹೂ ಚಿತ್ರದ ನಿರ್ಮಾಪಕ ದಿನೇಶ್ ಗಾಂಧಿ ತಮ್ಮ ಎಲ್ಲಾ ಒತ್ತಡಗಳಿಂದ ಮುಕ್ತಮುಕ್ತರಾಗಿದ್ದಾರೆ. ಹೂ ಹಾಸಿಗೆಯಲ್ಲಿ ದಿನೇಶ್ ಗಾಂಧಿ ಖುಷಿಯಾಗಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶಿಸಿ ನಟಿಸಿದ್ದ 'ಹೂ' ಚಿತ್ರಕ್ಕೆ ಎಲ್ಲಡೆಯಿಂದಲೂ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಚಿತ್ರದ ಬಿಡುಗಡೆಯಾದ ಮೊದಲ ವಾರ ಎದೆ ಢವ ಢವ ಎನ್ನುತ್ತಿತ್ತು. ಈಗ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯ ಹೂವಿನಂತ ಹಗುರಾಗಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಚಿತ್ರಕ್ಕೆ ಹಾಕಿದ ಆರು ಕೋಟಿ ಬಂಡವಾಳ ಹಂತಹಂತವಾಗಿ ಹಿಂತಿರುತ್ತಿದೆಯಂತೆ.
ರಾಜ್ಯದ 'ಹೂ' ಹಂಚಿಕೆದಾರರು ಕೂಡ ಖುಷಿಯಾಗಿದ್ದಾರೆ. ಯಾರಿಗೂ ನಷ್ಟವಾಗಿಲ್ಲ. ಒಂದು ವೇಳೆ ಚಿತ್ರ ಸೋತಿದ್ದರೆ ನಾನು ಮಾಧ್ಯಮಗಳ ಮುಂದೆ ಬರುತ್ತಿರಲಿಲ್ಲ. ಕೋಟಿ ನಷ್ಟವನ್ನು ಭರಿಸುವ ಶಕ್ತಿ ನನಗಿಲ್ಲ. ಸಿನಿಮಾ ಬಿಟ್ಟು ನನಗೇನು ಗೊತ್ತಿಲ್ಲ. ಇದೇ ನನ್ನ ಉಸಿರು ಎಂದು ದಿನೇಶ್ ಹೇಳಿದ್ದಾರೆ.
ಪ್ರೇಕ್ಷಕರು ಉತ್ತಮ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಎಂಬುದಕ್ಕೆ 'ಹೂ' ಚಿತ್ರವೇ ಸಾಕ್ಷಿ. ಎರಡು ಮೂರು ವರ್ಷಗಳ ಬಳಿಕ ರವಿಚಂದ್ರನ್ ನಟಿಸಿದ ಚಿತ್ರವಿದು. ಹಾಗಾಗಿ ರವಿ ಅಭಿಮಾನಿಗಳು ಹೆಚ್ಚು ಖುಷಿಯಾಗಿದ್ದಾರೆ. ಹೂ ಚಿತ್ರದ ಕಡೆಗೆ ಹೆಚ್ಚಾಗಿ ಯುವ ಪ್ರೇಕ್ಷಕರು ಆಕರ್ಷಿತರಾಗುತ್ತಿದ್ದಾರೆ ಎಂದು ದಿನೇಶ್ ವಿವರ ನೀಡಿದ್ದಾರೆ.