Don't Miss!
- News ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೂ ನಿರ್ಮಾಪಕ ದಿನೇಶ್ ಗಾಂಧಿ ಸ್ಮೈಲ್ಸ್
ಸದ್ಯಕ್ಕೆ ಹೂ ಚಿತ್ರದ ನಿರ್ಮಾಪಕ ದಿನೇಶ್ ಗಾಂಧಿ ತಮ್ಮ ಎಲ್ಲಾ ಒತ್ತಡಗಳಿಂದ ಮುಕ್ತಮುಕ್ತರಾಗಿದ್ದಾರೆ. ಹೂ ಹಾಸಿಗೆಯಲ್ಲಿ ದಿನೇಶ್ ಗಾಂಧಿ ಖುಷಿಯಾಗಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶಿಸಿ ನಟಿಸಿದ್ದ 'ಹೂ' ಚಿತ್ರಕ್ಕೆ ಎಲ್ಲಡೆಯಿಂದಲೂ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಚಿತ್ರದ ಬಿಡುಗಡೆಯಾದ ಮೊದಲ ವಾರ ಎದೆ ಢವ ಢವ ಎನ್ನುತ್ತಿತ್ತು. ಈಗ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯ ಹೂವಿನಂತ ಹಗುರಾಗಿದೆ ಎಂಬ ಮಾತುಗಳನ್ನು ಹೇಳಿದ್ದಾರೆ. ಚಿತ್ರಕ್ಕೆ ಹಾಕಿದ ಆರು ಕೋಟಿ ಬಂಡವಾಳ ಹಂತಹಂತವಾಗಿ ಹಿಂತಿರುತ್ತಿದೆಯಂತೆ.
ರಾಜ್ಯದ 'ಹೂ' ಹಂಚಿಕೆದಾರರು ಕೂಡ ಖುಷಿಯಾಗಿದ್ದಾರೆ. ಯಾರಿಗೂ ನಷ್ಟವಾಗಿಲ್ಲ. ಒಂದು ವೇಳೆ ಚಿತ್ರ ಸೋತಿದ್ದರೆ ನಾನು ಮಾಧ್ಯಮಗಳ ಮುಂದೆ ಬರುತ್ತಿರಲಿಲ್ಲ. ಕೋಟಿ ನಷ್ಟವನ್ನು ಭರಿಸುವ ಶಕ್ತಿ ನನಗಿಲ್ಲ. ಸಿನಿಮಾ ಬಿಟ್ಟು ನನಗೇನು ಗೊತ್ತಿಲ್ಲ. ಇದೇ ನನ್ನ ಉಸಿರು ಎಂದು ದಿನೇಶ್ ಹೇಳಿದ್ದಾರೆ.
ಪ್ರೇಕ್ಷಕರು ಉತ್ತಮ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಎಂಬುದಕ್ಕೆ 'ಹೂ' ಚಿತ್ರವೇ ಸಾಕ್ಷಿ. ಎರಡು ಮೂರು ವರ್ಷಗಳ ಬಳಿಕ ರವಿಚಂದ್ರನ್ ನಟಿಸಿದ ಚಿತ್ರವಿದು. ಹಾಗಾಗಿ ರವಿ ಅಭಿಮಾನಿಗಳು ಹೆಚ್ಚು ಖುಷಿಯಾಗಿದ್ದಾರೆ. ಹೂ ಚಿತ್ರದ ಕಡೆಗೆ ಹೆಚ್ಚಾಗಿ ಯುವ ಪ್ರೇಕ್ಷಕರು ಆಕರ್ಷಿತರಾಗುತ್ತಿದ್ದಾರೆ ಎಂದು ದಿನೇಶ್ ವಿವರ ನೀಡಿದ್ದಾರೆ.