Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆಸ್ಸಿಕಾ ಹಂತಕನಿಗೆ ಜೀವಾವಧಿ ಶಿಕ್ಷೆ ಕಾಯಂ
ಪ್ರಕರಣಕ್ಕೆ ಸಂಬಂಧಿಸಿದಂತೆ 2006ರಲ್ಲಿ ದೆಹಲಿಯ ಸ್ಥಳೀಯ ನ್ಯಾಯಾಲಯ ಆರೋಪಿ ಮನುಶರ್ಮನನ್ನು ಆರೋಪದಿಂದ ಮುಕ್ತಗೊಳಿಸಿತ್ತು. ಈ ಆದೇಶದ ವಿರುದ್ಧ ಜೆಸ್ಸಿಕಾ ಕುಟುಂಬದವರು ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಜೆಸ್ಸಿಕಾ ಹತ್ಯೆಯಲ್ಲಿ ಮನುಶರ್ಮಾ ಭಾಗಿಯಾಗಿದ್ದಾನೆಂದು ಹೇಳಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ನ ವಿಭಾಗೀಯ ಪೀಠದ ಪಿ ಸದಾಶಿವಂ ಮತ್ತು ಸ್ವಾತಂತರ್ ಕುಮಾರ್ ಅವರು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದು ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ಕಾಯಂಗೊಳಿಸಿದೆ.
ಹರಿಯಾಣ ಕಾಂಗ್ರೆಸ್ ಮುಖಂಡ ವಿನೋದ್ ಶರ್ಮಾ ಅವರ ಪುತ್ರ ಮನುಶರ್ಮ. 1999ರಲ್ಲಿ ದಕ್ಷಿಣ ರೆಸ್ಟೋರೆಂಟ್ ಒಂದರಲ್ಲಿ ಜೆಸ್ಸಿಕಾ ಲಾಲ್ ಕೊಲೆ ನಡೆದಿತ್ತು. ಮದ್ಯವನ್ನು ನೀಡಲು ನಿರಾಕರಿಸಿದ ಕಾರಣ ಮನುಶರ್ಮ ಆಕೆಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಎದುರಿಸುತ್ತಿದ್ದ.
ಸುಪ್ರೀಂಕೋರ್ಟ್ ನ ತೀರ್ಪಿನ ಬಗ್ಗೆ ಜೆಸ್ಸಿಕಾ ಸಹೋದರಿ ಸಬ್ರಿನಾ ಲಾಲ್ ಸಂತಸ ವ್ಯಕ್ತಪಡಿಸಿದ್ದು, ಈ ಕೇಸಿಗೆ ಸಂಬಂಧಿಸಿದಂತೆ ಇದ್ದ ಕೊನೆಯ ಬಾಗಿಲನ್ನು ಮುಚ್ಚಲಾಗಿದೆ. ನನಗಂತೂ ತುಂಬ ಸಂತಸವಾಗುತ್ತಿದೆ ಎಂದಿದ್ದಾರೆ. ಸದ್ಯಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿ ಶರ್ಮಾ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ದಾಖಲೆಗಳನ್ನು ನಾಶಪಡಿಸುವಲ್ಲಿ ಆರೋಪಿ ಮನುಶರ್ಮಾಗೆ ಸಹಾಯ ಮಾಡಿದ ಆರೋಪಎದುರಿಸುತ್ತಿದ್ದ ವಿಕಾಸ್ ಯಾದವ್ ಮತ್ತು ಅಮರಜಿತ್ ಸಿಂಗ್ ಗಿಲ್ ಅವರಿಗೆ ತಲಾ 4 ವರ್ಷಗಳ ಕಾರಾಗಾರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ವಿಧಿಸಿತ್ತು.