Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಲ್ಗೆಜ್ಜೆಗೆ ಮಾತಿನ ಭಾಗ ಮುಕ್ತಾಯ
ಜೀವನವನ್ನು ಗೆದ್ದರೆ, ಪ್ರೀತಿ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂಬ ಸಂದೇಶವನ್ನಿಟ್ಟುಕೊಂಡು ಎಸ್ ಬಂಗಾರು 'ಕಾಲ್ಗೆಜ್ಜೆ' ಚಿತ್ರಕ್ಕೆ ಕಥೆ-ಚಿತ್ರಕಥೆ- ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಪ್ರೇಮಕಥೆಯೊಂದನ್ನು ಸಂಗೀತದ ಸಪ್ತ ಸ್ವರಗಳ ಮೂಲಕ ಹೇಳ ಹೊರಟಿರುವ ನಿರ್ದೇಶಕರು, ಕುಂದಾಪುರ, ಮೇಲುಕೋಟೆ, ಬಾಬಾಬುಡನ್ಗಿರಿ ಬೆಟ್ಟದಲ್ಲಿ ಈಗಾಗಲೇ ಯಶಸ್ವಿಯಾಗಿ ಚಿತ್ರೀಕರಣ ನಡೆಸಿದ್ದಾರೆ.
ಕಳೆದ ವಾರ ಕಂಠೀರವ ಸ್ಟುಡಿಯೋದಲ್ಲಿ ಶರಣ್, ತಬಲ ನಾಣಿ ಅಭಿನಯದ ಹಾಸ್ಯ ದೃಶ್ಯಗಳ ಚಿತ್ರೀಕರಣದೊಂದಿಗೆ ಮಾತಿನ ಭಾಗವನ್ನು ಸಂಪೂರ್ಣಗೊಳಿಸಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರೂಪಿಕಾ ಹಾಗೂ ನಾಯಕನಾಗಿ ವಿಶ್ವಾಸ್, ಅಭಿನಯಿಸುತ್ತಿದ್ದು, ರಂಗಾಯಣರಘು, ಪ್ರವಿತ್ರಾ ಲೋಕೇಶ್, ವಿ. ಮನೋಹರ್, ಎಸ್. ಮಹೇಂದರ್, ಪ್ರಮುಖ ತಾರಾಗಣದಲ್ಲಿದ್ದಾರೆ.
ಗಂಧರ್ವರ ಸಾಹಿತ್ಯ ಹಾಗೂ ಸಂಭಾಷಣೆ, ವೀನಸ್ ಮೂರ್ತಿಯವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಭ್ರೈಟ್ ಎಂಟರ್ಟೈನ್ ಮೆಂಟ್ ಲಾಂಛನದಲ್ಲಿ ಉದ್ಯಮಿಯಾದ ಎಂ. ನಾಗಭೂಷಣ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಭೈರೇಗೌಡ ಎಂ. ಕಾರ್ಯಕಾರಿ ನಿರ್ಮಾಪಕರು.