Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಲ್ಗೆಜ್ಜೆಗೆ ಮಾತಿನ ಭಾಗ ಮುಕ್ತಾಯ
ಜೀವನವನ್ನು ಗೆದ್ದರೆ, ಪ್ರೀತಿ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂಬ ಸಂದೇಶವನ್ನಿಟ್ಟುಕೊಂಡು ಎಸ್ ಬಂಗಾರು 'ಕಾಲ್ಗೆಜ್ಜೆ' ಚಿತ್ರಕ್ಕೆ ಕಥೆ-ಚಿತ್ರಕಥೆ- ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಪ್ರೇಮಕಥೆಯೊಂದನ್ನು ಸಂಗೀತದ ಸಪ್ತ ಸ್ವರಗಳ ಮೂಲಕ ಹೇಳ ಹೊರಟಿರುವ ನಿರ್ದೇಶಕರು, ಕುಂದಾಪುರ, ಮೇಲುಕೋಟೆ, ಬಾಬಾಬುಡನ್ಗಿರಿ ಬೆಟ್ಟದಲ್ಲಿ ಈಗಾಗಲೇ ಯಶಸ್ವಿಯಾಗಿ ಚಿತ್ರೀಕರಣ ನಡೆಸಿದ್ದಾರೆ.
ಕಳೆದ ವಾರ ಕಂಠೀರವ ಸ್ಟುಡಿಯೋದಲ್ಲಿ ಶರಣ್, ತಬಲ ನಾಣಿ ಅಭಿನಯದ ಹಾಸ್ಯ ದೃಶ್ಯಗಳ ಚಿತ್ರೀಕರಣದೊಂದಿಗೆ ಮಾತಿನ ಭಾಗವನ್ನು ಸಂಪೂರ್ಣಗೊಳಿಸಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರೂಪಿಕಾ ಹಾಗೂ ನಾಯಕನಾಗಿ ವಿಶ್ವಾಸ್, ಅಭಿನಯಿಸುತ್ತಿದ್ದು, ರಂಗಾಯಣರಘು, ಪ್ರವಿತ್ರಾ ಲೋಕೇಶ್, ವಿ. ಮನೋಹರ್, ಎಸ್. ಮಹೇಂದರ್, ಪ್ರಮುಖ ತಾರಾಗಣದಲ್ಲಿದ್ದಾರೆ.
ಗಂಧರ್ವರ ಸಾಹಿತ್ಯ ಹಾಗೂ ಸಂಭಾಷಣೆ, ವೀನಸ್ ಮೂರ್ತಿಯವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಭ್ರೈಟ್ ಎಂಟರ್ಟೈನ್ ಮೆಂಟ್ ಲಾಂಛನದಲ್ಲಿ ಉದ್ಯಮಿಯಾದ ಎಂ. ನಾಗಭೂಷಣ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಭೈರೇಗೌಡ ಎಂ. ಕಾರ್ಯಕಾರಿ ನಿರ್ಮಾಪಕರು.